ಚಾಮರಾಜನಗರ; ರಸ್ತೆ ಅಪಘಾತಕ್ಕೆ ಓರ್ವ ಸ್ಥಳದಲ್ಲೇ ಮೃತ್ಯು, ನಾಲ್ವರಿಗೆ ಗಂಭೀರ ಗಾಯ
Update: 2021-10-21 09:46 GMT
ಚಾಮರಾಜನಗರ: ಟಿಪ್ಪರ್ ಲಾರಿಗೆ ಹಿಂಬದಿಯಿಂದ ಕೇರಳ ಪ್ರವಾಸಿಗರ ಕಾರು ಢಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇಗೂರು ನಲ್ಲಿ ನಡೆದಿದೆ.
ಕೇರಳ ಮೂಲದ ಸುಜಿತ್ ಕೃಷ್ಣನ್ (30) ಮೃತರು ಎಂದು ತಿಳಿದುಬಂದಿದೆ.
ವಿಜೇಶ್, ಜೀತು, ಸುಲೈಮಾನ್ ಹಾಗೂ ಜೋವನ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇವರೆಲ್ಲರೂ ಮೈಸೂರಿಗೆ ಪ್ರವಾಸ ಬಂದಿದ್ದರು ಎಂದು ತಿಳಿದುಬಂದಿದೆ.
ಟಿಪ್ಪರ್ ಚಾಲಕ ಏಕಾಏಕಿ ಬಲಗಡೆಗೆ ವಾಹನವನ್ನು ತಿರುಗಿಸಿದ್ದರಿಂದ ಈ ಅವಘಡ ಸಂಭವಿಸಿದ್ದು, ಟಿಪ್ಪರ್ ಜೊತೆ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.