ಮಂಗಳೂರು ವಿವಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Update: 2021-10-21 12:36 GMT

ಕೊಣಾಜೆ: ಮಂಗಳೂರು ವಿವಿಯ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಹುಟ್ಟಿನಿಂದ ಯಾರೂ ದೊಡ್ಡವರಾಗುವುದಿಲ್ಲ. ಅವರವರು ಮಾಡಿದ ಸಾಧನೆಯಿಂದ ಮಾತ್ರ  ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಗಳಾಗುತ್ತಾರೆ. ಬೇಡನಾಗಿದ್ದ ವಾಲ್ಮೀಕಿ ಸತ್ಯವನ್ನು ಅರಿತು ಮನಃಪರಿವರ್ತನೆಗೆ ಒಳಗಾಗಿ ಮಹಾನ್ ಕವಿ ಆದದ್ದು ಯೋಗ್ಯತೆಗೆ ಯಾವತ್ತೂ ಗೌರವವಿದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಮಾತನಾಡುವವನು ಸಂವೇದನಾಶೀಲನಾಗಿದ್ದಾಗ ಪ್ರತಿ ಮಾತು ಕೂಡ ಶ್ಲೋಕ ವಾಗುತ್ತದೆ  ಎಂಬುದಕ್ಕೆ ವಾಲ್ಮೀಕಿಯ ರಾಮಾಯಣವೇ ಸಾಕ್ಷಿಯಾಗಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಸೋಮಣ್ಣ ಹೊಂಗಳ್ಳಿ, ರಾಮಾಯಣವು ಇಡೀ ಭಾರತವನ್ನು ಆವರಿಸಿಕೊಂಡಿದೆ. ಜಾನಪದ ಮೂಲದಿಂದ ತೊಡಗಿ ಶಿಷ್ಠ ಪರಂಪರೆಯವರೆಗೆ ಹಲವು ರಾಮಾಯಣಗಳು ರಚನೆಗೊಂಡಿದ್ದು ಪ್ರಾದೇಶಿಕ ಭಾಷೆಗಳಲ್ಲೂ ಹಲವು ರಾಮಾಯಣಗಳು ಬಂದಿವೆ. ಎಲ್ಲ ರಾಮಾಯಣಗಳಿಗೂ ವಾಲ್ಮೀಕಿ ರಾಮಾಯಣವೇ ಮೂಲ ಎಂದು ಹೇಳಿದರು.

ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಧನಂಜಯ ಕುಂಬ್ಳೆ ಇವರು ಮಾತನಾಡಿ ನಿಜವಾದ ನೋವು ಕಾಡದೆ, ಕಾಣದೆ ಕಾವ್ಯ ಹುಟ್ಟುವುದಿಲ್ಲ ಎಂಬುದಕ್ಕೆ ರಾಮಾಯಣವೇ ಸಾಕ್ಷಿ. ನಮ್ಮೊಳಗಿನ ವಿಷಯಾಸಕ್ತಿಗಳನ್ನು ಮೀರಿದಾಗ ರಾಮನ ವ್ಯಕ್ತಿತ್ವ ಅರ್ಥವಾಗುತ್ತದೆ ಎಂದರು. ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ಯಶು ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ವಾಲ್ಮೀಕಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ನಮನಗಳನ್ನು ಸಮರ್ಪಿಸಲಾಯಿತು ವಿವಿಧ ಪೀಠಗಳ ಸಂಶೋಧನಾ ಸಹಾಯಕರು, ಸಿಬ್ಬಂದಿಗಳು,  ವಿದ್ಯಾರ್ಥಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News