ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ವಾಸುದೇವ ಕಾಮತ್ ನಿಧನ
Update: 2021-10-21 13:07 GMT
ಬಾರಕೂರು, ಅ.21: ರಾಜ್ಯ ಮತ್ತು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಜನಪ್ರಿಯ ಶಿಕ್ಷಕ, ನಿವೃತ್ತ ಮುಖ್ಯೋಪಾಧ್ಯಾಯರಾದ ನಾಗರಮಠ ವಾಸುದೇವ ಕಾಮತ್ ಅವರು ಹೃದಯಾಘಾತದಿಂದ ನಿಧನರಾದರು. ಅವರಿಗೆ 84 ವರ್ಷ ಪ್ರಾಯವಾಗಿತ್ತು.
ಸಾಸ್ತಾನ ಗುಂಡ್ಮಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 32 ವರ್ಷಗಳ ಕಾಲ ನಿಸ್ವಾರ್ಥ ಸೇವೆ ಸಲ್ಲಿಸಿ ಶಾಲಾ ಅಭ್ಯುದಯಕ್ಕೆ ಕಾರಣೀ ಭೂತರಾಗಿದ್ದರು. ಕಾರ್ಕಡ ನ್ಯೂ ಹಿರಿಯ ಪ್ರಾಥಮಿಕ ಶಾಲಾ ಸಂಚಾಲಕರಾಗಿ, ಉತ್ತಮ ಸಮಾಜ ಸೇವಕರಾಗಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಶಿಕ್ಷಕ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಸಂಖ್ಯೆಯ ಶಿಷ್ಯರು, ಅಭಿಮಾನಿಗಳನ್ನು ಅಗಲಿದ್ದಾರೆ.