ಶ್ರೀರಂಗಪಟ್ಟಣ ದಸರಾಗೆ ಹೆಚ್ಚುವರಿ 20 ಲಕ್ಷ ರೂ. ಅನುದಾನ ಬಿಡುಗಡೆ

Update: 2021-10-21 13:39 GMT
ಸಾಂದರ್ಭಿಕ ಚಿತ್ರ

ಮಂಡ್ಯ, ಅ.21: ಶ್ರೀರಂಗಪಟ್ಟಣ ದಸರಾಕ್ಕೆ ಈಗಾಗಲೇ 50 ಲಕ್ಷ ರೂ. ಹಣವನ್ನು ಮಂಜೂರು ಮಾಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡರ ಪ್ರಯತ್ನದ ಫಲವಾಗಿ ಹೆಚ್ಚುವರಿಯಾಗಿ 20 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ.

ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಮುಖಾಂತರ ಮಂಡ್ಯ ಜಿಲ್ಲಾಧಿಕಾರಿಗಳಿಗೆ  20 ಲಕ್ಷ ರೂ. ಅನುದಾನ ಬಿಡುಗಡೆಗೆ ಮಂಜೂರಾತಿ ನೀಡಲಾಗಿದ್ದು,  ಪ್ರವಾಸೋದ್ಯಮ ಇಲಾಖೆಯಿಂದಲೂ ಅನುದಾನ ಬಿಡುಗಡೆಯಾಗಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News