ಚಿಕ್ಕಮಗಳೂರು: ಸರ್ಕಾರಿ ಬಸ್, ಬೈಕ್ ನಡುವೆ ಅಪಘಾತ; ಸ್ಥಳದಲ್ಲೇ ಯುವಕ ಮೃತ್ಯು

Update: 2021-10-21 15:11 GMT

ಚಿಕ್ಕಮಗಳೂರು: ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾಸರಹಳ್ಳಿ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ, ಬೈಕಿನಲ್ಲಿ ಬಾಳೂರಿನ ಚೆನ್ನಡಲು ಗ್ರಾಮದ ರಾಜೇಶ್ (21) ಎಂಬ ಯುವಕ ಹಾಗೂ ದಾಸರಹಳ್ಳಿಯ ಅಶೋಕ್ ಇಬ್ಬರು ಬೈಕಿನಲ್ಲಿ ಸಂಚಾರ ಮಾಡುತಿದ್ದರು, ಸರ್ಕಾರಿ ಬಸ್ಸು ಮತ್ತಿಕಟ್ಟೆಯ ಕಡೆಗೆ ಸಾಗುತ್ತಿತ್ತು ಎಂದು ತಿಳಿದು ಬಂದಿದೆ.

ಈ ಅಪಘಾತದಲ್ಲಿ ಬಸ್ಸಿನ ಚಕ್ರಕ್ಕೆ ಸಿಲುಕಿದ ರಾಜೇಶ್ ಎಂಬ ಯುವಕನ ತಲೆ ಹಾಗೂ ಮುಖದ ಭಾಗ ಛಿದ್ರ ಛಿದ್ರವಾಗಿದ್ದು  ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನೋರ್ವ ಬೈಕಿನಲ್ಲಿದ ಅಶೋಕ್ ಎಂಬಾತನಿಗೆ ಗಂಭೀರವಾದ ಗಾಯಗಳಾಗಿದ್ದು ಆತನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News