ಶೃಂಗೇರಿ: ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಸ್ವಯಂಪ್ರೇರಿತ ಬಂದ್

Update: 2021-10-22 07:06 GMT

ಚಿಕ್ಕಮಗಳೂರು, ಅ.22: ಸುಸಜ್ಜಿತ ಸರಕಾರಿ ಆಸ್ಪತ್ರೆಗೆ ಆಗ್ರಹಿಸಿ ಶೃಂಗೇರಿ ತಾಲೂಕಿನಾದ್ಯಂತ ಶುಕ್ರವಾರ ಸ್ವಯಂಪ್ರೇರಿತ ಬಂದ್ ಆಚರಿಸಲಾಗುತ್ತಿದೆ.

ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿಯ ಕರೆಯ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ಸೂಚಿಸಿದ್ದು, ಆಟೋ, ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ವಿವಿಧ ಪಕ್ಷಗಳು, ಸಂಘಟನೆಗಳಿಂದಲೂ ಬಂದ್ ಗೆ ಬೆಂಬಲ ವ್ಯಕ್ತವಾಗಿದೆ.

ಸುಸಜ್ಜಿತ ಆಸ್ಪತ್ರೆಗಾಗಿ 14 ವರ್ಷಗಳಿಂದ ಇಲ್ಲಿನ ಜನರು ಸಂಬಂಧಪಟ್ಟವರ ಗಮನಸೆಳೆದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಶೃಂಗೇರಿ ನಾಗರಿಕರು ಸ್ವಯಂ ಪ್ರೇರಿತವಾಗಿ ತಾಲೂಕು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News