ಅ.30: ದ.ಕ. ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ
Update: 2021-10-22 16:11 GMT
ಮಂಗಳೂರು, ಅ.22: ದ.ಕ. ಜಿಲ್ಲೆಯ ರಾಷ್ಟ್ರೀಕೃತ, ಖಾಸಗಿ, ಸ್ಥಳೀಯ ಬ್ಯಾಂಕ್ಗಳು, ನರ್ಬಾರ್ಡ್ ಮತ್ತು ಇತರ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಇದೇ ಅ.30ರಂದು ಬೆಳಗ್ಗೆ 10 ಗಂಟೆಗೆ ಬಂಟವಾಳದ ಬಂಟರ ಭವನದಲ್ಲಿ ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬ ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಎಸ್., ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಘನ ಉಪಸ್ಥಿತಿ ವಹಿಸುವರು. ಶಾಸಕ ರಾಜೇಶ್ ನಾಯಕ್ ಮಳಿಗೆಗಳನ್ನು ಉದ್ಘಾಟಿಸುವರು ಎಂದು ಪ್ರಕಟನೆ ತಿಳಿಸಿದೆ.