ತುಳು ಅಕಾಡಮಿಯ ಸಿರಿಚಾವಡಿಯಲ್ಲಿ ತುಳು-ಕನ್ನಡ ಸಾಹಿತ್ಯೋತ್ಸವ

Update: 2021-10-22 17:10 GMT

ಮಂಗಳೂರು, ಅ.22 : ಸಾಹಿತ್ಯ ಕೃಷಿಯಿಂದ ತುಳುನಾಡಿನ ಸಂಸ್ಕೃತಿ-ಸಂಸ್ಕಾರ ಉಳಿದಿದೆ, ಹೊಸ ಚಿಗುರುಗಳನ್ನು ಸೂಕ್ತ ವೇದಿಕೆಯ ಮೂಲಕ ಬೆಳೆಸುವ ಕೆಲಸ ನಮ್ಮದಾಗಬೇಕು. ತುಳು ಸಾಹಿತ್ಯ ಅಕಾಡಮಿಯು ಇಂತಹ ಕಾರ್ಯಕ್ರಮಗಳಿಗೆ ವಿಶೇಷ ಮಾನ್ಯತೆ ನೀಡುವ ಕೆಲಸ ಮಾಡುವಲ್ಲಿ ಮುಂದಾಗಿರುವುದರಿಂದ ನಿರಂತರವಾಗಿ ಹಮ್ಮಿಕೊಳ್ಳಲು ಕಾರಣವಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ ಸಾರ್ ಹೇಳಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಥಾ ಬಿಂದು ಪ್ರಕಾಶನ ಮಂಗಳೂರು, ಕಲ್ಕೂರ ಪ್ರತಿಷ್ಠಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಕಾಡಮಿಯ ಸಿರಿ ಚಾವಡಿಯಲ್ಲಿ ನಡೆದ ಕನ್ನಡ-ತುಳು ಸಾಹಿತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಶುಭ ಹಾರೈಸಿದರು. ಸಾಹಿತಿ ಪಿ.ವಿ. ಪ್ರದೀಪ್ ಕುಮಾರ್‌ರ 'ಸೂತ್ರದಾರ' ಕಾದಂಬರಿಯನ್ನು ತುಳು ಅಕಾಡಮಿಯ ಸದಸ್ಯ ಡಾ.ಆಕಾಶ್‌ ರಾಜ್ ಜೈನ್ ಬಿಡುಗಡೆಗೊಳಿಸಿದರು.

ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಉಡುಪಿ ಜಿಲ್ಲಾ ಪತ್ರಕರ್ತರ ವೇದಿಕೆಯ ಅಧ್ಯಕ್ಷ ಡಾ.ಶೇಖರ ಅಜೆಕಾರು, ನಿವೃತ್ತ ಬ್ಯಾಂಕ್ ಅಧಿಕಾರಿ ಬೆಟ್ಟಂಪ್ಪಾಡಿ ಸುಂದರ ಶೆಟ್ಟಿ, ಬಜಪೆ ವಿಮಾನ ಪ್ರಾಧಿಕಾರದ ನಿವೃತ್ತ ನಿರ್ದೇಶಕ ಎಂ.ಆರ್. ವಾಸುದೇವ, ತುಳು ಅಕಾಡಮಿಯ ಸದಸ್ಯ ನಿಟ್ಟೆ ಶಶಿಧರ್ ಶೆಟ್ಟಿ, ಕಾರ್ಯಕ್ರಮದ ಸದಸ್ಯ ಸಂಚಾಲಕ ನರೇಂದ್ರ ಕೆರೆಕಾಡು ಉಪಸ್ಥಿತರಿದ್ದರು.

ಪುತ್ತೂರಿನ ಸತ್ಯಶಾಂತ ಪ್ರತಿಷ್ಠಾನದ ಅಧ್ಯಕ್ಷೆ ಶಾಂತಾ ಕುಂಟಿನಿ ಸ್ವಾಗತಿಸಿದರು, ಶ್ರೀಗುರು ಚೈತನ್ಯ ಪ್ರತಿಷ್ಠಾನದ ಅಧ್ಯಕ್ಷ ಹೊನ್ನಯ್ಯ ವಂದಿಸಿದರು. ನವೀನ್ ಕುಲಾಲ್ ಮತ್ತು ರಶ್ಮಿ ಸನಿಲ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News