ಮಂಗಳೂರು: ಎಸೆಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ

Update: 2021-10-24 16:43 GMT

ಮಂಗಳೂರು, ಅ.24: ಎಸೆಸೆಲ್ಸಿಯ ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಪ್ಪು ಕುಡುಪಾಡಿಯಲ್ಲಿ ನಡೆದಿದೆ.

ಜೆಪ್ಪು ಕುಡುಪಾಡಿ ನಿವಾಸಿ, ಎಸೆಸೆಲ್ಸಿ ವಿದ್ಯಾರ್ಥಿ ಅನಿಶ್ ಪಿ. ಪಾಯಲ್ (16) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ದಿ.ಪ್ರಶಾಂತ್ ಪಾಯಲ್ ಎಂಬವರ ಪುತ್ರ ಅನಿಶ್ ಯಾವುದೋ ಕಾರಣದಿಂದ ಮನನೊಂದು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಶಾಂತ್ ಪಾಯಲ್ ಮೂರು ವರ್ಷಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು, ಆ ಬಳಿಕ ಅನಿಶ್ ಮಾನಸಿಕವಾಗಿ ನೊಂದುಕೊಂಡಿದ್ದ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News