ಯುನಿವೆಫ್ ನಿಂದ 'ಶೇಖ್ ಅಹ್ಮದ್ ಸರ್ ಹಿಂದಿ ಪ್ರಶಸ್ತಿ -2021'ಗೆ ಅರ್ಜಿ ಆಹ್ವಾನ

Update: 2021-10-25 04:36 GMT

ಮಂಗಳೂರು, ಅ.25: ನಾಡು, ನುಡಿ, ಭಾಷೆ, ಶಿಕ್ಷಣ, ಸಮುದಾಯ ಮತ್ತು ಸಮಾಜದ ಒಳಿತು ಹಾಗೂ ಪ್ರಗತಿಗಾಗಿ, ಯಾವುದೇ ರೀತಿಯ ಪ್ರತಿಫ಼ಲಾಪೇಕ್ಷೆಯಿಲ್ಲದೆ, ಪ್ರಶಸ್ತಿ, ಪುರಸ್ಕಾರಗಳ ಆಗ್ರಹವಿಲ್ಲದೆ ಶ್ರಮಿಸುತ್ತಿರುವ ವ್ಯಕ್ತಿಯೊಬ್ಬರಿಗೆ ಯುನಿವೆಫ಼್ ಕರ್ನಾಟಕ ಪ್ರತಿ ವರ್ಷ ಶೇಖ್ ಅಹ್ಮದ್ ಸರ್ ಹಿಂದಿ ಪ್ರಶಸ್ತಿಯನ್ನು ನೀಡಿ ಗೌರವಿಸುತ್ತಿದೆ. 2021ನೇ ಸಾಲಿನ ಪ್ರಶಸ್ತಿಗಾಗಿ ದ.ಕ. ಹಾಗೂ ಉಡುಪಿ ಜಿಲ್ಲೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಅರ್ಹರಾದ ವ್ಯಕ್ತಿ ಯಾವುದೇ ಸಂಘಟನೆಯ ಸದಸ್ಯನಾಗಿರಬಾರದು. ಯಾವನೇ ವ್ಯಕ್ತಿ ಸ್ವತಃ ಈ ಪ್ರಶಸ್ತಿಗೆ ಅರ್ಜಿ ಹಾಕಲು ಅವಕಾಶವಿಲ್ಲ. ಉಭಯ ಜಿಲ್ಲೆಗಳ ಮುಸ್ಲಿಮ್ ಸಮುದಾಯದ ಇಂತಹ ವ್ಯಕ್ತಿಗಳ ಪರಿಚಯವಿರುವವರು ಅವರನ್ನು ಈ ಪ್ರಶಸ್ತಿಗೆ ಶಿಫಾರಸು ಮಾಡಬಹುದು.
ಪ್ರಶಸ್ತಿಯು 10,000 ರೂ.ನಗದು ಮತ್ತು ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ.
ಈ ಪ್ರಶಸ್ತಿಯನ್ನು ನವೆಂಬರ್ 5ರಂದು ನಡೆಯುವ ಪ್ರವಾದಿ ಮುಹಮ್ಮದ್ (ಸ.) ರವರ ಸಂದೇಶ ಪ್ರಚಾರ ಅಭಿಯಾನ 'ಅರಿಯಿರಿ ಮನುಕುಲದ ಪ್ರವಾದಿಯನ್ನು- 2021' ಇದರ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಮಂಗಳೂರಿನ ಕಂಕನಾಡಿಯ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ನೀಡಲಾಗುವುದು.
ಅಕ್ಟೋಬರ್ 31ರ ಒಳಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಸಂಚಾಲಕರು, ಶೇಖ್ ಅಹ್ಮದ್ ಸರ್ ಹಿಂದಿ ಪ್ರಶಸ್ತಿ ವಿಭಾಗ, ಯುನಿವೆಫ಼್ ಕರ್ನಾಟಕ, ದಾರುಲ್ ಇಲ್ಮ್, ಒಂದನೇ ಮಹಡಿ, ಲುಲು ಸೆಂಟರ್, ಇಂದಿರಾ ಆಸ್ಪತ್ರೆ ಬಳಿ, ಫ಼ಳ್ನೀರ್, ಮಂಗಳೂರು - 575 001 ಇಲ್ಲಿಗೆ ಅಥವಾ +919945913824  ವಾಟ್ಸಾಪ್ ಸಂಖ್ಯೆಗೆ ಕಳುಹಿಸುವಂತೆ ಯುನಿವೆಫ಼್ ಕರ್ನಾಟಕ ಸಂಚಾಲಕ ಮುಹಮ್ಮದ್ ಸೈಫುದ್ದೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News