ಕ್ರಿಕೆಟ್ ನಲ್ಲಿ ಭಾರತಕ್ಕೆ ಸೋಲು: ಹೃದಯಾಘಾತದಿಂದ ಕ್ರೀಡಾಭಿಮಾನಿ ಮೃತ್ಯು

Update: 2021-10-25 13:45 GMT

ಮಡಿಕೇರಿ, ಅ.25: ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್‌ನಲ್ಲಿ ರವಿವಾರ ನಡೆದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಸೋತ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

ದೊಡ್ಡಮಳ್ತೆ ನಿವಾಸಿ ಅಣ್ಣಯ್ಯಗೌಡ ಎಂಬವರ ಪುತ್ರ ಡಿ.ಎ.ಉದಯ(55) ಮೃತಪಟ್ಟವರು. ಇವರು ರವಿವಾರ ಇಂಡಿಯಾ-ಪಾಕ್ ನಡುವಿನ ಕ್ರಿಕೆಟ್ ಪಂದ್ಯಾಟವನ್ನು ಟಿವಿಯಲ್ಲಿ ವೀಕ್ಷಿಸುತ್ತಿದ್ದರು. ಭಾರತ ಪಂದ್ಯವನ್ನು ಸೋತ ಹತ್ತು ನಿಮಿಷಗಳ ಬಳಿಕ ಉದಯ  ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ಸೋಮವಾರಪೇಟೆ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿರುವುದಾಗಿ ವೈದ್ಯರು ದೃಢಪಡಿಸಿದರು.

ಕ್ರೀಡಾಭಿಮಾನಿ ಹಾಗೂ ಕಾಫಿ ಬೆಳೆಗಾರರಾಗಿದ್ದ ಉದಯ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News