ಅ.27ರಿಂದ ಎಸಿಬಿಯಿಂದ ದೂರು ಸ್ವೀಕಾರ

Update: 2021-10-25 17:10 GMT

ಮಂಗಳೂರು, ಅ.25:  ಅ.27ರಿಂದ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಪುತ್ತೂರು ಮತ್ತು ಸುಳ್ಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ.

ಅ.27ರಂದು ಬೆಳಗ್ಗೆ 11ಕ್ಕೆ ಬೆಳ್ತಂಗಡಿ ತಾಲೂಕಿನ ನಿರೀಕ್ಷಣಾ ಮಂದಿರದಲ್ಲಿ, ಮಧ್ಯಾಹ್ನ 2:30ಕ್ಕೆ ಮೂಡುಬಿದಿರೆ ತಾಲೂಕಿನ ನಿರೀಕ್ಷಣಾ ಮಂದಿರ, ಅ.28ರಂದು ಬೆಳಗ್ಗೆ 10:30ಕ್ಕೆ ಬಂಟ್ವಾಳ ತಾಲೂಕಿನ ನಿರೀಕ್ಷಣಾ ಮಂದಿರ, ಅ.29ರಂದು ಬೆಳಗ್ಗೆ 11ಕ್ಕೆ ಸುಳ್ಯ ತಾಲೂಕಿನ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2:30ಕ್ಕೆ ಪುತ್ತೂರು ತಾಲೂಕಿನ ನಿರೀಕ್ಷಣಾ ಮಂದಿರದಲ್ಲಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಆರಕ್ಷಕ ಉಪಾಧಿಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News