ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Update: 2021-10-25 17:15 GMT

ಮಂಗಳೂರು, ಅ.25: ರಾಜ್ಯ ಸಫಾಯಿ ಕರ್ಮಚಾರಿ ನಿಗಮದಿಂದ ಸಫಾಯಿ ಕರ್ಮಚಾರಿ ಮತ್ತು ಅವರ ಕುಟುಂಬದ ಅವಲಂಬಿ ತರಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸಫಾಯಿ ಕರ್ಮಚಾರಿ/ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌/ ಪೌರಕಾರ್ಮಿಕರ ಮಕ್ಕಳಿಗೆ ಆನ್‌ಲೈನ್ ಪಾಠ ಕೇಳಲು ಹಾಗೂ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಟ್ಯಾಬ್ ವಿತರಣಾ ಯೋಜನೆ, ಮಹಿಳಾ ಸಫಾಯಿ ಕರ್ಮಚಾರಿ/ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌/ ಪೌರಕಾರ್ಮಿಕರುಗಳಿಗೆ ದ್ವಿಚಕ್ರ ವಾಹನ ಸೌಲಭ್ಯದ ಯೋಜನೆ ಹಾಗೂ ಸಫಾಯಿ ಕರ್ಮಚಾರಿ/ ಪೌರಕಾರ್ಮಿಕರು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳ ನೋಂದಾಯಿತ ಸಂಘ ಸಂಸ್ಥೆಗಳಿಗೆ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳನ್ನು ಖರೀದಿಸಲು ಶೇ.75ರಷ್ಟು ಸಹಾಯಧನ ನೀಡಲಾಗುವುದು.

ನ.15ರೊಳಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ. ಅರ್ಜಿಗಳನ್ನು ವೆಬ್‌ಸೈಟ್ ನಿಗಮದ ವೆಬ್‌ಸೈಟ್ www.ksskdc.kar.nic.in ನಲ್ಲಿ ಅಪ್‌ಲೋಡ್ ಮಾಡಬಹುದು ಅಥವಾ ವೆಬ್‌ಸೈಟ್‌ನಿಂದ ಪಡೆದು ಭರ್ತಿ ಮಾಡಿ ಅವಶ್ಯ ದಾಖಲೆಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ನಗರದ ಜಿಎಚ್‌ಎಸ್ ರಸ್ತೆಯ ಜನತಾ ಬಜಾರ್ ಕಟ್ಟಡ, 2ನೇ ಮಹಡಿಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ದೂ.ಸಂ.: 0824-2420114, 2951814ನ್ನು ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News