ವಿಷದ ಹಾವು ಕಚ್ಚಿ ಕೃಷಿಕ ಮೃತ್ಯು

Update: 2021-10-26 17:44 GMT

ಬೈಂದೂರು, ಅ.26: ವಿಷದ ಹಾವು ಕಚ್ಚಿದ ಪರಿಣಾಮ ಕೃಷಿಕರೊಬ್ಬರು ಮೃತಪಟ್ಟ ಘಟನೆ ಅ.25ರಂದು ಸಂಜೆ ವೇಳೆ ಗೋಳಿಹೊಳೆ ಗ್ರಾಮದ ಕೊಡಿಯಾಲ್ಕೇರಿ ಎಂಬಲ್ಲಿ ನಡೆದಿದೆ.

ಮೃತರನ್ನು ಕೊಡಿಯಾಲ್ಕೇರಿ ಕೆಳಬೈಳು ನಿವಾಸಿ ಮಂಜು ನಾಯ್ಕ ಎಂಬವರ ಮಗ ಸುರೇಶ(50) ಎಂದು ಗುರುತಿಸಲಾಗಿದೆ. ಮನೆಯ ಸಮೀಪದ ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಅವರಿಗೆ ವಿಷಪೂರಿತ ಹಾವು ಕಚ್ಚಿತ್ತೆನ್ನಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಅವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News