​ಸಹಾಯಧನಕ್ಕೆ ಅರ್ಜಿ ಆಹ್ವಾನ

Update: 2021-10-27 12:58 GMT

ಉಡುಪಿ, ಅ.27: 2021-22ನೇ ಸಾಲಿನ ಸಫಾಯಿ ಕರ್ಮಚಾರಿ/ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ ಹಾಗೂ ಪೌರಕಾರ್ಮಿಕರ 9, 10 ಮತ್ತು ಪ್ರಥಮ ಹಾಗೂ ದ್ವಿತೀಯ ಪಿಯುಸಿ ಓದುತ್ತಿರುವ ಮಕ್ಕಳಿಗೆ ಆನ್‌ಲೈನ್ ಪಾಠ ಕೇಳಲು ಮತ್ತು ಅವರ ವಿಧ್ಯಾಭ್ಯಾಸದ ಅನುಕೂಲಕ್ಕಾಗಿ ಟ್ಯಾಬ್‌ಗಳ ವಿತರಣೆ ಹಾಗೂ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳನ್ನು ಖರೀದಿಸಲು ನೊಂದಾಯಿತ ಸಂಘ-ಸಂಸ್ಥೆಗಳಿಗೆ ಶೇ.75ರಷ್ಟು ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ನಿಗಮದ ವೆಬ್‌ಸೈಟ್-www.ksskdc.kar.nic.in-ನಲ್ಲಿ ಆನ್‌ಲೈನ್ ಮೂಲಕ ಅಥವಾ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ನವೆಂಬರ್ 15ರವರೆಗೆ ಅವಧಿ ಯನ್ನು ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ದಿ ನಿಗಮದ ದೂ. ಸಂ: 0820-2574884 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News