ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

Update: 2021-10-27 14:55 GMT

ಮಂಗಳೂರು ಅ.27: ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಪಂ ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಕರ್ನಾಟಕದ ಅಗತ್ಯ ವಸ್ತುಗಳ (ಸಾರ್ವಜನಿಕ ವಿತರಣಾ ಪದ್ಧತಿಯಡಿ) ನಿಯಂತ್ರಣ ಆದೇಶದನ್ವಯ ಅರ್ಹ ಸಂಘ ಸಂಸ್ಥೆಗಳಿಂದ ಅ.26ರಿಂದ ನ.25ರವರೆಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಿದೆ.

ಭರ್ತಿ ಮಾಡಿದ ದಾಖಲೆಗಳನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಬಂಟ್ವಾಳ ತಹಶೀಲ್ದಾರರ ಕಚೇರಿಗೆ ಸಲ್ಲಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News