ಪಿಲಿಕುಳದಲ್ಲಿ ಗೀತ ಗಾಯನ ಸಂಪನ್ನ

Update: 2021-10-28 14:29 GMT

ಮಂಗಳೂರು : ರಾಜ್ಯ ಸರಕಾರದ ಆಶಯದಂತೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಲೇಕ್ ಗಾರ್ಡನ್‌ನಲ್ಲಿ ಅ.28ರಂದು ಬೆಳಗ್ಗೆ ಕರ್ನಾಟಕದ ಶ್ರೇಷ್ಠತೆಯನ್ನು ಸಾರುವ ಮೂರು ಗೀತೆಗಳನ್ನು ನಾಡಗೀತೆಯೊಂದಿಗೆ ಕನ್ನಡಾಂಬೆಯ ಭಾವಚಿತ್ರದ ಮುಂದೆ ಏಕಕಾಲದಲ್ಲಿ ಸಾಮೂಹಿಕವಾಗಿ ಹಾಡಲಾಯಿತು.

ಇದೇ ಸಂದರ್ಭದಲ್ಲಿ ಕನ್ನಡ ನಾಡು, ನುಡಿ, ಸಂಸ್ಕತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ಧರಾಗಿರುತ್ತೇವೆ ಎಂದು ಸಂಕಲ್ಪಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಪ್ರಾಧಿಕಾರದ ಆಯುಕ್ತರು, ನಿರ್ದೇಶಕರು, ಅಧಿಕಾರಿಗಳು, ಸಿಬ್ಬಂದಿ, ಪ್ರವಾಸಿಗರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News