×
Ad

ಕನ್ನಡ ರಾಜ್ಯೋತ್ಸವ: ಧ್ವಜಾರೋಹಣಕ್ಕೆ ಸಚಿವರ ನಿಯೋಜನೆ

Update: 2021-10-30 20:41 IST
photo: PTI

ಬೆಂಗಳೂರು, ಅ. 30: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನೆರವೇರಿಸಲು ಸಚಿವರನ್ನು ನಿಯೋಜಿಸಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.

ಸಚಿವರಾದ ಗೋವಿಂದ ಕಾರಜೋಳ-ಬೆಳಗಾವಿ, ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಬಿ.ಶ್ರೀರಾಮುಲು-ಚಿತ್ರದುರ್ಗ, ಉಮೇಶ್ ಕತ್ತಿ-ಬಾಗಲಕೋಟೆ, ಅಂಗಾರ ಎಸ್.-ದಕ್ಷಿಣ ಕನ್ನಡ, ಜೆ.ಸಿ.ಮಾಧುಸ್ವಾಮಿ-ತುಮಕೂರು, ಆರಗ ಜ್ಞಾನೇಂದ್ರ- ಚಿಕ್ಕಮಗಳೂರು, ಡಾ.ಅಶ್ವತ್ಥ ನಾರಾಯಣ-ರಾಮನಗರ, ಸಿ.ಸಿ.ಪಾಟೀಲ್-ಗದಗ, ಆನಂದ್ ಸಿಂಗ್-ವಿಜಯನಗರ.

ಕೋಟ ಶ್ರೀನಿವಾಸ ಪೂಜಾರಿ-ಕೊಡಗು, ಪ್ರಭು ಚೌಹಾಣ್-ಬೀದರ್, ಮುರುಗೇಶ್ ಆರ್.ನಿರಾಣಿ-ಕಲಬುರಗಿ, ಶಿವರಾಮ್ ಹೆಬ್ಬಾರ್-ಉತ್ತರ ಕನ್ನಡ, ಎಸ್.ಟಿ.ಸೋಮಶೇಖರ್-ಮೈಸೂರು, ಬಿ.ಸಿ.ಪಾಟೀಲ್- ಹಾವೇರಿ, ಬಿ.ಬಸವರಾಜ (ಭೈರತಿ)-ದಾವಣಗೆರೆ, ಶಶಿಕಲಾ ಜೊಲ್ಲೆ-ವಿಜಯಪುರ, ಎನ್.ನಾಗರಾಜು (ಎಂಟಿಬಿ) -ಬೆಂಗಳೂರು ಗ್ರಾಮಾಂತರ, ನಾರಾಯಣಗೌಡ-ಮಂಡ್ಯ.

ಆಚಾರ್ ಹಾಲಪ್ಪ-ಕೊಪ್ಪಳ, ಶಂಕರ್ ಪಾಟೀಲ್ ಮುನೇನಕೊಪ್ಪ-ಧಾರವಾಡ, ಮುನಿರತ್ನ-ಕೋಲಾರ, ಚಾಮರಾಜನಗರ, ರಾಯಚೂರು, ಬಳ್ಳಾರಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೇರವೇರಿಸಲಿದ್ದಾರೆ. ಅನಾರೋಗ್ಯ ಅಥವಾ ಇತರೆ ಕಾರಣಗಳಿಂದಾಗಿ ಸಚಿವರು ಧ್ವಜಾರೋಹಣ ಕಾರ್ಯಕ್ರಮಕ್ಕೆ ಅನುಪಸ್ಥಿತರಿದ್ದಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಧ್ವಜಾರೋಹಣ ಮಾಡತಕ್ಕದ್ದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಮೊಹಮ್ಮದ್ ನಯೀಮ್ ಮೊಮಿನ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News