×
Ad

ಕನ್ನಡದಲ್ಲಿ ಕವಾಯತು: ಸಿಎಂ ಬೊಮ್ಮಾಯಿ ಘೋಷಣೆ

Update: 2021-11-01 15:43 IST

ಬೆಂಗಳೂರು: ಕನ್ನಡದ ಪ್ರಗತಿಯಾದರೆ ಕರ್ನಾಟಕದ ಪ್ರಗತಿಯಾಗುತ್ತದೆ.  ಆಡಳಿತದಲ್ಲಿ ಕನ್ನಡ ಅನುಷ್ಠಾನ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಪೊಲೀಸ್‌ ಕವಾಯತಿನ ನಿರ್ದೇಶನ ಸೇರಿದಂತೆ ಎಲ್ಲ ಆದೇಶಗಳನ್ನು ಕನ್ನಡದಲ್ಲಿಯೇ ನೀಡುವ ಪದ್ಧತಿಯನ್ನು  ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ಬೆಂಗಳೂರಿನಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.

ಈಗ ಕವಾಯತು ಕಮಾಂಡಗಳು ಆಂಗ್ಲ ಭಾಷೆಯಲ್ಲಿವೆ. ಮುಂದಿನ ದಿನಗಳಲ್ಲಿ ಕವಾಯತು ಕಮಾಂಡಗಳನ್ನು ಕನ್ನಡದಲ್ಲಿ ನೀಡುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದರು.

ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ಕೊಠಡಿ,  ಮೂಲಭೂತ ಸೌಕರ್ಯಕ್ಕೆ ಮುಂದಿನ ಆಯವ್ಯಯದಲ್ಲಿ ಅತಿ ಹೆಚ್ಚಿನ ಅನುದಾನವನ್ನು ಮೀಸಲಿರಿಸಲಾಗುವುದು ಎಂದರು. 

ಮನೆ ಮನೆಗೆ ಪಡಿತರ

ಮನೆ ಮನೆಗೆ ಪಡಿತರ ವಿತರಣೆಯನ್ನು ಫಲಾನುಭವಿಗಳಿಗೆ  ನಿಗದಿತ, ಸಮಯ, ದಿನಾಂಕದಂದು ಮಾಡಲಾಗುವುದು. ಪ್ರಸ್ತುತ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿ ಜನವರಿ 26 ರಿಂದ ಜನಸೇವಕ ಯೋಜನೆ ರಾಜ್ಯದಾದ್ಯಂತ ವಿಸ್ತರಿಸಲಾಗುವುದು ಎಂದರು.

ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಗ್ರಹ ಕೇಳಿಬರುತ್ತಿರುವ ಬಗ್ಗೆ ಸುದ್ದಿಗಾರರಿಗೆ ಉತ್ತರಿಸಿದ  ಮುಖ್ಯಮಂತ್ರಿಗಳು, ಪ್ರಮುಖರೊಂದಿಗೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News