'ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಸಾಧ್ಯವಿಲ್ಲ': ಸುಪ್ರೀಂಕೋರ್ಟ್
ಹೊಸದಿಲ್ಲಿ: ಕಡಿಮೆ ಮಾಲಿನ್ಯಕಾರಕ ವಸ್ತುಗಳನ್ನು ಬಳಸಿ ತಯಾರಿಸಿದ ಹಸಿರು ಪಟಾಕಿಗಳು ಪಶ್ಚಿಮ ಬಂಗಾಳದಲ್ಲಿ ಈ ವಾರದಿಂದ ಆರಂಭವಾಗುವ ಹಬ್ಬದ ಋತುವಿನಲ್ಲಿ ಬಳಸಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ. ಈ ಮೂಲಕ ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ವಾಯು ಮಾಲಿನ್ಯ ಕಡಿಮೆ ಮಾಡಲು ಪಟಾಕಿಗಳ ಸಂಪೂರ್ಣ ನಿಷೇಧವನ್ನು ಹೇರುವ ಕಲ್ಕತಾ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದೆ.
ಶುಕ್ರವಾರದಿಂದ ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ಆದೇಶವನ್ನು ಅವಲಂಬಿಸಿದ ನ್ಯಾಯಮೂರ್ತಿಗಳು "ಪಟಾಕಿಯನ್ನು ಸಂಪೂರ್ಣ ನಿಷೇಧಿಸಲು ಸಾಧ್ಯವಿಲ್ಲ. ದುರುಪಯೋಗವನ್ನು ತಡೆಯಲು ಕಾರ್ಯವಿಧಾನವನ್ನು ಬಲಪಡಿಸಿ" ಎಂದು ಹೇಳಿದರು.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಹಾಗೂ ಅಜಯ್ ರಸ್ತೋಗಿ ಅವರು ಪಶ್ಚಿಮ ಬಂಗಾಳ ಸರಕಾರಕ್ಕೆ ನಿಷೇಧಿತ ಪಟಾಕಿ ಹಾಗೂ ಸಂಬಂಧಿತ ವಸ್ತುಗಳನ್ನು ರಾಜ್ಯದಲ್ಲಿ ಆಮದು ಮಾಡಿಕೊಳ್ಳುವುದಿಲ್ಲ ಮತ್ತು ಪ್ರವೇಶ ದ್ವಾರಗಳಲ್ಲಿ ನಿಲ್ಲಿಸುವುದನ್ನು ಖಚಿತಪಡಿಸಿಕೊಳ್ಳುವ ಸಾಧ್ಯತೆಯನ್ನು ಅನ್ವೇಷಿಸಲು ಕೇಳಿದರು.
ಪಶ್ಚಿಮಬಂಗಾಳ ರಾಜ್ಯದಲ್ಲಿ ಎಲ್ಲಾ ರೀತಿಯ ಪಟಾಕಿಗಳ ಮಾರಾಟ, ಬಳಕೆ ಮತ್ತು ಖರೀದಿಯನ್ನು ನಿಷೇಧಿಸಿ ಶುಕ್ರವಾರ ಹೈಕೋರ್ಟ್ ಹೊರಡಿಸಿದ ಆದೇಶದ ವಿರುದ್ಧ ಪಟಾಕಿ ತಯಾರಕರು ಸಲ್ಲಿಸಿದ ಮನವಿಯನ್ನು ನ್ಯಾಯಾಧೀಶರು ಆಲಿಸಿದರು.