×
Ad

ಮೂಡುಬಿದಿರೆ: ಸಿಡಿಲಾಘಾತದಿಂದ ಇಬ್ಬರು ಮೃತ್ಯು, ಮೂವರು ಅಸ್ವಸ್ಥ

Update: 2021-11-01 20:11 IST
ಮಣಿಪ್ರಸಾದ್ - ಯಶವಂತ

ಮಂಗಳೂರು, ನ.1: ಸಿಡಿಲಾಘಾತಕ್ಕೆ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಮೂವರು ತೀವ್ರ ಅಸ್ವಸ್ಥರಾಗಿರುವ ಬಗ್ಗೆ ಮೂಡುಬಿದಿರೆ ಕಂಚಿಬೈಲ್‌ನಲ್ಲಿ ನಡೆದಿದೆ.

ಮೃತರನ್ನು ಕಂಚಿಬೈಲು ನಿವಾಸಿಗಳಾದ ಯಶವಂತ (22) ಹಾಗೂ ಮಣಿಪ್ರಸಾದ್ (22)ಎಂದು ಗುರುತಿಸಲಾಗಿದೆ. ಅಸ್ವಸ್ಥರನ್ನು ಗಣೇಶ್, ಸಂದೀಪ್ ಹಾಗೂ ಪ್ರವೀಣ್ ಎಂದು ಗುರುತಿಸಲಾಗಿದ್ದು, ಇವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಸಂಜೆ ಮೂಡುಬಿದಿರೆಯ ಪುತ್ತಿಗೆ ಪಂಚಾಯತ್ ವ್ಯಾಪ್ತಿಯ ಕಂಚಿಬೈಲ್ ಯೆರುಗುಂಡಿ ಪ್ರದೇಶದಲ್ಲಿ ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಈ ಸಂದರ್ಭ ಯೆರುಗುಂಡಿ ಫಾಲ್ಸ್‌ಗೆ ತೆರಳಿದ್ದ ಐವರು ಸಿಡಿಲಾಘಾತಕ್ಕೆ ಅಸ್ವಸ್ಥಗೊಂಡಿದ್ದು, ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಮೂವರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಾಳು ಸಂದೀಪ್ ನೀಡಿದ ದೂರಿನ್ವಯ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News