×
Ad

ರಾಜ್ಯದಲ್ಲಿಂದು 239 ಮಂದಿಗೆ ಕೊರೋನ ಪ್ರಕರಣ ದೃಢ: 5 ಮಂದಿ ಸಾವು

Update: 2021-11-02 20:51 IST

ಬೆಂಗಳೂರು, ನ.2: ರಾಜ್ಯದಲ್ಲಿ ಮಂಗಳವಾರ 239 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 5 ಜನ ಸೋಂಕಿಗೆ ಬಲಿಯಾಗಿದ್ದು, 376 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,88,760ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,089ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 8,370ಕ್ಕೆ ಇಳಿಕೆಯಾಗಿದ್ದು, ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಸಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

5 ಸೋಂಕಿತರು ಬಲಿ: ಬೆಂಗಳೂರು ನಗರ 3, ತುಮಕೂರು 1, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 239 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 139, ಚಿಕ್ಕಮಗಳೂರು 2, ದಕ್ಷಿಣ ಕನ್ನಡ 18, ಧಾರವಾಡ 4, ಹಾಸನ 4, ಕಲಬುರ್ಗಿ 1, ಕೊಡಗು 5, ಮಂಡ್ಯ 9, ಮೈಸೂರು 31, ಶಿವಮೊಗ್ಗ 1, ತುಮಕೂರು 8, ಉಡುಪಿ 4, ಉತ್ತರ ಕನ್ನಡ ಜಿಲ್ಲೆಯಲ್ಲಿ 6 ಪ್ರಕರಣಗಳು ಪತ್ತೆಯಾಗಿವೆ.

ರಾಜಧಾನಿಯಲ್ಲಿ ಮಂಗಳವಾರ 139 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 3 ಜನರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಇಲ್ಲಿಯವರೆಗೆ 12,52,106 ಕೊರೋನ ಸೋಂಕಿತರು ದೃಢಪಟ್ಟಿದ್ದು, 16,284 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 12,29,397 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News