ನೀರಜ್ ಚೋಪ್ರಾ ಸಹಿತ 12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ

Update: 2021-11-02 17:16 GMT

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಸಹಿತ 12 ಕ್ರೀಡಾಪಟುಗಳು ಈ ವರ್ಷದ ಪ್ರತಿಷ್ಟಿತ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಯುವಜನ ವ್ಯವಹಾರಗಳು ಹಾಗೂ  ಕ್ರೀಡಾ ಸಚಿವಾಲಯವು 2021 ರ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ನೀಡಲಾಗುವ 12 ಕ್ರೀಡಾಪಟುಗಳ ಹೆಸರನ್ನು ಮಂಗಳವಾರ ಪ್ರಕಟಿಸಿದೆ.

ಶಿಖರ್ ಧವನ್ ಸಹಿತ 35 ಕ್ರೀಡಾಪಟುಗಳಿಗೆ ಅರ್ಜುನ ಪ್ರಶಸ್ತಿಯನ್ನು ಕ್ರೀಡಾ ಸಚಿವಾಲಯ ಘೋಷಿಸಿದೆ.

ಟೋಕಿಯೊ ಒಲಿಂಪಿಕ್ಸ್ ಹಾಗೂ  ಪ್ಯಾರಾಲಿಂಪಿಕ್ಸ್  ಪದಕ ವಿಜೇತರುಗಳಿಗೆ ಭಾರತದ ಅತ್ಯುನ್ನತ ಕ್ರೀಡಾ ಗೌರವವನ್ನು ನೀಡಲಾಗುತ್ತದೆ. ಈ ಪಟ್ಟಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ದಂತಕಥೆ ಮಿಥಾಲಿ ರಾಜ್ ಹಾಗೂ  ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಕೂಡ ಇದ್ದಾರೆ.

ನವೆಂಬರ್ 13 ರಂದು ದಿಲ್ಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುವುದು. ಎಲ್ಲಾ ಕ್ರೀಡಾಪಟುಗಳು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ತಮ್ಮ ಪ್ರಶಸ್ತಿಗಳನ್ನು ಸ್ವೀಕರಿಸುತ್ತಾರೆ. ಕ್ರೀಡೆಯಲ್ಲಿನ ಶ್ರೇಷ್ಠತೆಯನ್ನು ಗುರುತಿಸಲು ಹಾಗೂ ಪುರಸ್ಕರಿಸಲು ಪ್ರತಿ ವರ್ಷ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

35 ಅರ್ಜುನ ಪ್ರಶಸ್ತಿ ಪುರಸ್ಕೃತರಲ್ಲಿ ಪ್ಯಾರಾಲಿಂಪಿಕ್ಸ್ ಪದಕ ವಿಜೇತರು ಹಾಗೂ  ಕ್ರಿಕೆಟಿಗರಾದ ಶಿಖರ್ ಧವನ್ ಸೇರಿದ್ದಾರೆ.

ದ್ರೋಣಾಚಾರ್ಯ ಪ್ರಶಸ್ತಿಗೆ ಒಟ್ಟು 10 ಕೋಚ್‌ಗಳನ್ನು ಆಯ್ಕೆ ಮಾಡಲಾಗಿದೆ.

ಜೀವಮಾನದ ಸಾಧನೆಯ ವಿಭಾಗದಲ್ಲಿ ಟಿ.ಪಿ.ಔಸೆಫ್ (ಅಥ್ಲೆಟಿಕ್ಸ್), ಸರ್ಕಾರ್ ತಲ್ವಾರ್ (ಕ್ರಿಕೆಟ್), ಸರ್ಪಾಲ್ ಸಿಂಗ್ (ಹಾಕಿ), ಅಶನ್ ಕುಮಾರ್ (ಕಬಡ್ಡಿ) ಹಾಗೂ  ತಪನ್ ಕುಮಾರ್ ಪಾಣಿಗ್ರಾಹಿ (ಈಜು) ಅವರನ್ನು ಗೌರವಕ್ಕೆ ಆಯ್ಕೆ ಮಾಡಲಾಯಿತು.

ನಿಯಮಿತ ದ್ರೋಣಾಚಾರ್ಯ ವಿಭಾಗದಲ್ಲಿ ರಾಧಾಕೃಷ್ಣನ್ ನಾಯರ್ ಪಿ .(ಅಥ್ಲೆಟಿಕ್ಸ್), ಸಂಧ್ಯಾ ಗುರುಂಗ್ (ಬಾಕ್ಸಿಂಗ್), ಪ್ರೀತಮ್ ಸಿವಾಚ್ (ಹಾಕಿ), ಜೈ ಪ್ರಕಾಶ್ ನೌಟಿಯಾಲ್ (ಪ್ಯಾರಾ ಶೂಟಿಂಗ್) ಹಾಗೂ  ಸುಬ್ರಮಣಿಯನ್ ರಾಮನ್ (ಟೇಬಲ್ ಟೆನಿಸ್) ಪ್ರಶಸ್ತಿ ಗೆದ್ದಿದ್ದಾರೆ.

ಸಜ್ಜನ್ ಸಿಂಗ್ (ಕುಸ್ತಿ), ಮಾಜಿ ವಿಶ್ವ ಹಾಗೂ  ಏಷ್ಯನ್ ಚಾಂಪಿಯನ್ ಬಾಕ್ಸರ್ ಲೇಖಾ ಕೆ.ಸಿ, ಅಭಿಜಿತ್ ಕುಂಟೆ (ಚೆಸ್), ದವೀಂದರ್ ಸಿಂಗ್ ಗಾರ್ಚಾ (ಹಾಕಿ) ಹಾಗೂ  ವಿಕಾಸ್ ಕುಮಾರ್ (ಕಬಡ್ಡಿ) ಅವರೊಂದಿಗೆ ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪುರಸ್ಕೃತರು:

ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ:

ನೀರಜ್ ಚೋಪ್ರಾ (ಅಥ್ಲೆಟಿಕ್ಸ್), ರವಿಕುಮಾರ್ (ಕುಸ್ತಿ), ಲವ್ಲಿನಾ ಬೊರ್ಗೊಹೈನ್ (ಬಾಕ್ಸಿಂಗ್), ಪಿ.ಆರ್. ಶ್ರೀಜೇಶ್ (ಹಾಕಿ), ಅವನಿ ಲೇಖರಾ (ಪ್ಯಾರಾ ಶೂಟಿಂಗ್), ಸುಮಿತ್ ಆಂಟಿಲ್ (ಪ್ಯಾರಾ ಅಥ್ಲೆಟಿಕ್ಸ್), ಪ್ರಮೋದ್ ಭಗತ್ (ಪ್ಯಾರಾ ಬ್ಯಾಡ್ಮಿಂಟನ್), ಕೃಷ್ಣ ನಗರ್ (ಪ್ಯಾರಾ ಬ್ಯಾಡ್ಮಿಂಟನ್),  ಮನೀಶ್ ನರ್ವಾಲ್ (ಪ್ಯಾರಾ ಶೂಟಿಂಗ್), ಮಿಥಾಲಿ ರಾಜ್ (ಕ್ರಿಕೆಟ್), ಸುನೀಲ್ ಚೆಟ್ರಿ (ಫುಟ್ಬಾಲ್), ಮನ್ಪ್ರೀತ್ ಸಿಂಗ್ (ಹಾಕಿ).

ಅರ್ಜುನ ಪ್ರಶಸ್ತಿಗಳು:

ಅರ್ಪಿಂದರ್ ಸಿಂಗ್ (ಅಥ್ಲೆಟಿಕ್ಸ್), ಸಿಮ್ರಾನ್ ಜಿತ್ ಕೌರ್ (ಬಾಕ್ಸಿಂಗ್), ಶಿಖರ್ ಧವನ್ (ಕ್ರಿಕೆಟ್), ಸಿಎ ಭವಾನಿ ದೇವಿ (ಫೆನ್ಸಿಂಗ್), ಮೋನಿಕಾ (ಹಾಕಿ), ವಂದನಾ ಕಟಾರಿಯಾ (ಹಾಕಿ), ಸಂದೀಪ್ ನರ್ವಾಲ್ (ಕಬಡ್ಡಿ), ಹಿಮಾನಿ ಉತ್ತಮ್ ಪರಬ್ (ಮಲ್ಲಕಂಬ), ಅಭಿಷೇಕ್ ವರ್ಮಾ (ಶೂಟಿಂಗ್), ಅಂಕಿತಾ ರೈನಾ (ಟೆನಿಸ್), ದೀಪಕ್ ಪುನಿಯಾ (ಕುಸ್ತಿ), ದಿಲ್‌ಪ್ರೀತ್ ಸಿಂಗ್ (ಹಾಕಿ), ಹರ್ಮನ್ ಪ್ರೀತ್ ಸಿಂಗ್ (ಹಾಕಿ), ರೂಪಿಂದರ್ ಪಾಲ್ ಸಿಂಗ್ (ಹಾಕಿ), ಸುರೇಂದರ್ ಕುಮಾರ್ (ಹಾಕಿ), ಅಮಿತ್ ರೋಹಿದಾಸ್ (ಹಾಕಿ), ಬೀರೇಂದ್ರ ಲಾಕ್ರಾ (ಹಾಕಿ), ಸುಮಿತ್ (ಹಾಕಿ), ನೀಲಕಂಠ ಶರ್ಮಾ (ಹಾಕಿ), ಹಾರ್ದಿಕ್ ಸಿಂಗ್ (ಹಾಕಿ), ವಿವೇಕ್ ಸಾಗರ್ ಪ್ರಸಾದ್ (ಹಾಕಿ), ಗುರ್ಜಂತ್ ಸಿಂಗ್ (ಹಾಕಿ), ಮನ್ದೀಪ್ ಸಿಂಗ್ (ಹಾಕಿ), ಶಂಶೇರ್ ಸಿಂಗ್ (ಹಾಕಿ), ಲಲಿತ್ ಕುಮಾರ್ ಉಪಾಧ್ಯಾಯ (ಹಾಕಿ), ವರುಣ್ ಕುಮಾರ್ (ಹಾಕಿ), ಸಿಮ್ರಾನ್ ಜೀತ್ ಸಿಂಗ್ (ಹಾಕಿ), ಯೋಗೇಶ್ ಕಥುನಿಯಾ (ಪ್ಯಾರಾ ಅಥ್ಲೆಟಿಕ್ಸ್) ನಿಶಾದ್ ಕುಮಾರ್ (ಪ್ಯಾರಾ ಅಥ್ಲೆಟಿಕ್ಸ್), ಪ್ರವೀಣ್ ಕುಮಾರ್ (ಪ್ಯಾರಾ ಅಥ್ಲೆಟಿಕ್ಸ್), ಸುಹಾಸ್ ಯತಿರಾಜ್ (ಪ್ಯಾರಾ ಬ್ಯಾಡ್ಮಿಂಟನ್) ಸಿಂಗ್ರಾಜ್ ಅಧಾನ (ಪ್ಯಾರಾ ಶೂಟಿಂಗ್ ), ಭಾವಿನಾ ಪಟೇಲ್ (ಪ್ಯಾರಾ ಟೇಬಲ್ ಟೆನಿಸ್), ಹರ್ವಿಂದರ್ ಸಿಂಗ್ (ಪ್ಯಾರಾ ಆರ್ಚರಿ) ಹಾಗೂ  ಶರದ್ ಕುಮಾರ್ (ಪ್ಯಾರಾ ಅಥ್ಲೆಟಿಕ್ಸ್).

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News