ಉತ್ತರ ಕರ್ನಾಟಕದಲ್ಲಿ ಪುನೀತ್ ಹೆಸರಲ್ಲಿ ಫಿಲ್ಮ್ ಸಿಟಿ ನಿರ್ಮಿಸಿ: ಜಯಮೃತ್ಯುಂಜಯ ಶ್ರೀ

Update: 2021-11-03 14:10 GMT

ಬೆಂಗಳೂರು, ನ.3: ಹೃದಯಾಘಾತದಿಂದ ಮೃತರಾದ ನಟ ಪುನೀತ್ ರಾಜ್‍ಕುಮಾರ್ ಅವರ ಹೆಸರಲ್ಲಿ ಉತ್ತರ ಕರ್ನಾಟಕದಲ್ಲಿ ಫಿಲ್ಮ್ ಸಿಟಿ ನಿರ್ಮಿಸಬೇಕೆಂದು ಕೂಡಲ ಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಶ್ರೀ ಆಗ್ರಹಿಸಿದ್ದಾರೆ.  

ಬುಧವಾರ ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಅಪ್ರತಿಮ ನಟನನ್ನು ಕಳೆದುಕೊಂಡು ದೇಶ ಬಡವಾಗಿದೆ. ಪುನೀತ್ ರಾಜ್‍ಕುಮಾರ್ ಅವರು ಕಲಾ ಕ್ಷೇತ್ರದಲ್ಲಿ ಜನಿಸಿದರೂ ಅನೇಕ ಜನಸೇವೆ ಮಾಡಿದ್ದಾರೆ. ಕಳಸಾ ಬಂಡೂರಿ ಹೋರಾಟಕ್ಕೂ ನೈತಿಕ ಬೆಂಬಲ ನೀಡಿದ್ದರು ಎಂದರು.

ರಾಜ್ಯ ಸರಕಾರ ಉತ್ತರ ಕರ್ನಾಟಕದಲ್ಲಿ ಪುನೀತ್ ಹೆಸರಿನಲ್ಲಿ ಫಿಲ್ಮ್ ಸಿಟಿ ಹಾಗೂ ಐಎಎಸ್ ತರಬೇತಿ ಕೇಂದ್ರವನ್ನು ಆರಂಭಿಸಬೇಕೆಂದು ಒತ್ತಾಯಿಸಿದರು. ಪದ್ಮಶ್ರೀ ಹಾಗೂ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಬೇಕೆಂದು ಸರಕಾರಕ್ಕೆ ಮನವಿ ಮಾಡುವುದಾಗಿ ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News