ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯಿಂದ ನಟ ವಿಜಯ ಸೇತುಪತಿ ಮೇಲೆ ದಾಳಿ

Update: 2021-11-03 15:24 GMT
Photo: Vijay Sethupathi/Instagram

ಬೆಂಗಳೂರು: ತಮಿಳು ನಟ ವಿಜಯ್ ಸೇತುಪತಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ದಾಳಿ ನಡೆಸಿರುವ ಘಟನೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ನಟನ ಸುತ್ತಲೂ ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದರೂ ಅಪರಿಚಿತ ವ್ಯಕ್ತಿ ಅವರ ಮೇಲೆ ದಾಳಿ ನಡೆಸಿದ್ದಾನೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಜಯ್ ಸೇತುಪತಿ ನಿರ್ಗಮನದ ಕಡೆಗೆ ನಡೆದುಕೊಂಡು ಹೋಗುತ್ತಿರುವಾಗ ಒಬ್ಬ ವ್ಯಕ್ತಿ ಇದ್ದಕ್ಕಿದ್ದಂತೆ ಹಿಂದಿನಿಂದ ಓಡಿ ಬಂದು ಅವರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ವೀಡಿಯೊದಲ್ಲಿ ಕಂಡುಬಂದಿದೆ. ತಕ್ಷಣವೇ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ರಾಷ್ಟ್ರಪ್ರಶಸ್ತಿ ವಿಜೇತ ನಟ ಅನಿರೀಕ್ಷಿತ ಘಟನೆಯಿಂದ ನಲುಗಿದ್ದಾರೆ. ಆದರೆ, ಈ ದಾಳಿಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News