ಪುನೀತ್‍ ರಾಜ್‍ಕುಮಾರ್ ಗೆ ಪದ್ಮಶ್ರೀ; ಸೂಕ್ತ ಸಮಯದಲ್ಲಿ ಚರ್ಚಿಸಿ ನಿರ್ಧಾರ: ಮುಖ್ಯಮಂತ್ರಿ ಬೊಮ್ಮಾಯಿ

Update: 2021-11-08 14:22 GMT

ಬೆಂಗಳೂರು, ನ.8: ಇತ್ತೀಚೆಗೆ ನಿಧನರಾದ ಕನ್ನಡ ಚಲನಚಿತ್ರ ರಂಗದ ನಾಯಕ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವ ಕುರಿತು ಸೂಕ್ತ ಸಮಯದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸೋಮವಾರ ಇಲ್ಲಿನ ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್‍ಗೆ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸ್ಸು ಮಾಡುವ ಕುರಿತು ಅವರ ಕುಟುಂಬ ಸದಸ್ಯರ ಜೊತೆಯೂ ಚರ್ಚೆ ನಡೆಸಲಾಗುವುದು. ಪ್ರಶಸ್ತಿ ಶಿಫಾರಸ್ಸಿಗೆ ನಿಯಮಾವಳಿಗಳಿವೆ. ಅದರ ಪ್ರಕಾರ ಎಲ್ಲವನ್ನು ತೀರ್ಮಾನ ಮಾಡಲಾಗುತ್ತದೆ ಎಂದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News