×
Ad

ಕೋಡಿ ಬ್ಯಾರೀಸ್‌ನಲ್ಲಿ ಮತದಾರರ ಸಾಕ್ಷರ ಸಂಘ ಉದ್ಘಾಟನೆ

Update: 2021-11-10 21:59 IST

ಕುಂದಾಪುರ, ನ.10: ಸ್ವಾಸ್ಥ್ಯ ಸಮಾಜಕ್ಕೆ ಕಾನೂನಿನ ಅರಿವು ಅಗತ್ಯ ಎಂದು ಜಿಲ್ಲಾ ಮತದಾರರ ಸಾಕ್ಷರ ಸಂಘದ ಸಂಪನ್ಮೂಲ ವ್ಯಕ್ತಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ರಾಘವೇಂದ್ರ ಕಿಣಿ ಹೇಳಿದ್ದಾರೆ.

ಕೋಡಿ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಮತದಾರರ ಸಾಕ್ಷರ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಸಂವಿದಾನ-ಮೂಲ ಭೂತ ಹಕ್ಕು-ಕರ್ತವ್ಯ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ, ಕಡ್ಡಾಯ ಶಿಕ್ಷಣ ಹಕ್ಕು ಇದರ ಅರಿವು ಅರಿತಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದರು.

ಅಧ್ಯಕ್ಷತೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್, ರಾಜ್ಯಶಾಸ್ತ್ರ ಉಪನ್ಯಾಸಕಿ ನಿಲುಫರ್ ಉಪಸ್ಥಿತರಿದ್ದರು.

ದ್ವಿತೀಯ ಕಲಾ ವಿದ್ಯಾರ್ಥಿನಿ ರುಕ್ಸಾನ ಸ್ವಾಗತಿಸಿದರು. ಪ್ರಥಮ ಕಲಾ ವಿದ್ಯಾರ್ಥಿನಿ ಫಾಯಿಝಾ ವಂದಿಸಿದರು. ಪ್ರಥಮ ಕಲಾ ವಿದ್ಯಾರ್ಥಿನಿ ರಿಫಾನ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News