ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಕಲಾವಿದರಿಗೆ ಸಹಾಯಧನ

Update: 2021-11-12 12:09 GMT

ಮಂಗಳೂರು: ಯಕ್ಷದ್ರುವ ಪಟ್ಲ ಫೌಂಡೇಶನ್(ರಿ) ಮಂಗಳೂರು, ಅಡ್ಯಾರು ಶ್ರೀ ವೀರಾಂಜನೇಯ ಸ್ವಾಮಿ ಮಂದಿರದ ಆಡಳಿತ ಸಮಿತಿ ಹಾಗೂ ಅಡ್ಯಾರು ಗ್ರಾಮದ ನಾಗರಿಕರಿಂದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ನುಡಿ ನಮನದ ಶ್ರದ್ಧಾಂಜಲಿ ಕಾರ್ಯಕ್ರಮವು ಅಡ್ಯಾರ್ ಶ್ರೀ ವೀರಾಂಜನೇಯ ಸ್ವಾಮಿ ಮಂದಿರದಲ್ಲಿ ಇತ್ತೀಚೆಗೆ ಜರಗಿತು.

ಪುನೀತ್ ಸ್ಮರಣಾರ್ಥವಾಗಿ ಯಕ್ಷಗಾನ ಕ್ಷೇತ್ರದಲ್ಲಿ ಕಳೆದ 40 ವರ್ಷಗಳಿಂದ ನೇಪಥ್ಯ ಕಲಾವಿದರಾಗಿ ಸೇವೆ ಸಲ್ಲಿಸುತ್ತಿರುವ ರಘು ನಾಳರವರ ಮಗಳ ಮದುವೆಗಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ 50 ಸಾವಿರ ರೂ. ಸಹಾಯಧನವನ್ನು ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಹಸ್ತಾಂತರಿಸಿದರು. ಈ ಸಂದರ್ಭ  ಅಡ್ಯಾರು ಗ್ರಾಮದ 50 ಮಂದಿ ನೇತ್ರದಾನ ಮಾಡುವ ಸಂಕಲ್ಪಕೈಗೊಂಡರು.

ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಮಂದಿರದ ಆಡಳಿತ ಸಮಿತಿಯ ಅಧ್ಯಕ್ಷ ರಮೇಶ್ ತುಂಬೆ, ದ.ಕ ಜಿಲ್ಲಾ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಜಯಶೀಲ ಅಡ್ಯಂತಾಯ, ರೋಟರಿ ಕ್ಲಬ್ ಫರಂಗಿಪೇಟೆಯ ಅಧ್ಯಕ್ಷ ಸುರೇಂದ್ರ ಕಂಬಳಿ ನುಡಿ ನಮನ ಸಲ್ಲಿಸಿದರು.

ಮಂದಿರದ ಗೌರವಾಧ್ಯಕ್ಷ ಎ.ದಿವಾಕರ್ ನಾಕ್, ಎ. ಮಾಧವ ನಾಕ್, ಶಿವರಾಜ್ ಶೆಟ್ಟಿ, ಪಟ್ಲ ಟ್ರಸ್ಟ್‌ನ ಕೋಶಾಧಿಕಾರಿ ಸುದೇಶ್ ಕುಮಾರ್ ರೈ, ಅಶ್ವಿಥ್ ಶೆಟ್ಟಿ , ಹರ್ಷ ಕುಮಾರ್ ಶೆಟ್ಟಿ, ರತ್ನಾಕರ ಅಮೀನ್, ದೇವಿ ಕಿರಣ್ ಶೆಟ್ಟಿ, ಪ್ರದೀಪ್ ಕುಮಾರ್ ಶೆಟ್ಟಿ, ಇಂದಿರಾ ಶೆಟ್ಟಿ, ಪದ್ಮಜ ಭಂಡಾರಿ, ಮೋಹಿನಿ ಶಂಕರ್, ಶಕಿಲಾ ಎಂ ನಾ ಕ್, ರಾಜ್‌ಕುಮಾರ್ ನಾ  ಕ್, ಪ್ರವೀ ಣ್ ಕುಮಾರ್, ಅಜಿತ್ ಶೆಟ್ಟಿ ಉಪಸ್ಥಿತರಿದ್ದರು. ಪಟ್ಲ ಫೌಂಡೇಶನ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರು ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News