ಸರಕಾರಿ ಅಪರ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

Update: 2021-11-12 15:08 GMT

ಮಂಗಳೂರು, ನ.12: ಪುತ್ತೂರು ತಾಲೂಕಿನ ಸರಕಾರಿ ಅಪರ ವಕೀಲರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ, ಹುಟ್ಟಿದ ದಿನಾಂಕ, ಜಾತಿ, ವರ್ಗ ಮತ್ತು 7 ವರ್ಷ ವಕೀಲ ವೃತ್ತಿಯನ್ನು ಪೂರೈಸಿರುವ, ನ್ಯಾಯಾಲಯದಲ್ಲಿ ವಕಾಲತ್ತು ಮಾಡಿರುವ ಅನುಭವವುಳ್ಳ ವಿವರ, ಅವಧಿ ಮತ್ತು ಪುರಾವೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ನ.15 ಕೊನೆಯ ದಿನವಾಗಿದೆ. ಅರ್ಜಿಯನ್ನು ಜಿಲ್ಲಾಧಿಕಾರಿಯ ಕಚೇರಿಯ ಕಾನೂನು ಶಾಖೆಯಲ್ಲಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News