ಮಂಗಳೂರು: ಖಾಸಗಿ ಬಸ್ಸಿಗೆ ಕಲ್ಲೆಸೆತ
Update: 2021-11-13 15:15 IST
ಮಂಗಳೂರು, ನ.13: ನಗರ ಹೊರವಲಯದ ಬಂಗ್ರ ಕೂಳೂರು ಸಮೀಪದ ಕರಾವಳಿ ಕಾಲೇಜು ಬಳಿ ಖಾಸಗಿ ಸಿಟಿ ಬಸ್ಸೊಂದಕ್ಕೆ ದುಷ್ಕರ್ಮಿಗಳು ಕಲ್ಲೆಸೆದ ಘಟನೆ ಶನಿವಾರ ನಡೆದಿದೆ.
ಕಾಟಿಪಳ್ಳ ಕೈಕಂಬ-ಮಂಗಳಾದೇವಿ ಮಧ್ಯೆ ಚಲಿಸುವ ರೂಟ್ ನಂಬ್ರ 15ಎ (ಎಸ್ಎಂ ಟ್ರಾವೆಲ್ಸ್) ಬಸ್ಸಿಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.