ಚಾಮರಾಜನಗರ: ಜಿಲ್ಲಾಸ್ಪತ್ರೆ ಉಳಿವಿಗಾಗಿ ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನ

Update: 2021-11-13 14:31 GMT

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿರುವ ಜಿಲ್ಲಾ ಆಸ್ಪತ್ರೆಯನ್ನು ಉಳಿಸಿಕೊಳ್ಳುವ ಸಲುವಾಗಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೂಡ್ಲೂರು ಆರ್. ಶ್ರೀಧರ್ ಮೂರ್ತಿ ಮತ್ತು ಪಿ.ಸೋಮಣ್ಣರವರ ನೇತೃತ್ವದಲ್ಲಿ ಸಾರ್ವಜನಿಕರು ಮತ್ತು ರೋಗಿಗಳಿಂದ ಸಹಿ ಸಂಗ್ರಹ ಅಭಿಯಾನ ನಡೆಯಿತು.

ಚಾಮರಾಜನಗರ ಬಿ.ರಾಚಯ್ಯ ಜ್ಯೋಡಿ ರಸ್ತೆಯಲ್ಲಿರುವ ಜಿಲ್ಲಾಸ್ಪತ್ರೆಯನ್ನು ತಾಲ್ಲೂಕಿನ ಯಡಬೆಟ್ಟ ಸಮೀಪ ಇರುವ ಮೆಡಿಕಲ್ ಕಾಲೇಜು ಬಳಿಗೆ ಸ್ಥಳಾಂತರ ಮಾಡಿದ್ದನ್ನು ವಿರೋಧಿಸಿ ನಿತ್ಯ ಪ್ರತಿಭಟನೆಗಳು ನಡೆಯುತ್ತಿದೆ. ಇದರ ನಡುವೆ ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯ ಕೂಡ್ಲೂರು ಆರ್. ಶ್ರೀಧರ್ ಮೂರ್ತಿ ಮತ್ತು ವೆಂಕಟಯ್ಯನಛತ್ರದ ಪಿ.ಸೋಮಣ್ಣ ನೇತೃತ್ವದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯಿತು. ಈ ಅಭಿಯಾನಕ್ಕೆ ಸಾರ್ವಜನಿಕರು ಮತ್ತು ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಸಂಬಂಧಿಕರು ಸಹಿ ಹಾಕುವ ಮೂಲಕ ಬೆಂಬಲ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News