ನೀತಿ ಸಂಹಿತೆ: ಪತ್ರಕರ್ತರ ಸಮ್ಮೇಳನ ಮುಂದೂಡಿಕೆ; ಶಿವಾನಂದ ತಗಡೂರು

Update: 2021-11-13 17:29 GMT
 ಶಿವಾನಂದ ತಗಡೂರು

ಬೆಂಗಳೂರು, ನ. 13: ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ನ.27 ಮತ್ತು 28ರಂದು ನಡೆಯಬೇಕಿದ್ದ 36ನೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನವನ್ನು ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಭಾಗವಹಿಸಲು ಅನುಮತಿ ಪಡೆಯಲೇಬೇಕು ಎನ್ನುವ ಚುನಾವಣಾ ಆಯೋಗದ ನಿರ್ದೇಶನ ಹಿನ್ನೆಲೆಯಲ್ಲಿ ಅನುಮತಿ ಕೋರಿ ಚುನಾವಣಾ ಆಯೋಗಕ್ಕೆ ಸರಕಾರ ಪತ್ರ ಬರೆದರೂ ಅನುಮತಿ ಬರುವುದು ವಿಳಂಬವಾಗುತ್ತಿದೆ. ಆಯೋಗದ ಅನುಮತಿ ಇಲ್ಲದೆ ಸಿಎಂ ಮತ್ತು ಸಚಿವರು ಸಮ್ಮೇಳನದಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣ ಈ ತೀರ್ಮಾನಕ್ಕೆ ಬರಲಾಗಿದೆ.

ಸ್ವಾಗತ ಸಮಿತಿ ಕೋರಿಕೆ ಮೇರೆಗೆ ಸಮ್ಮೇಳನವನ್ನು ಡಿಸೆಂಬರ್ ತಿಂಗಳಿಗೆ ಮುಂದೂಡಲಾಗಿದೆ. ಮುಖ್ಯಮಂತ್ರಿಯವರ ದಿನಾಂಕ ಖಚಿತಪಡಿಸಿಕೊಂಡು ಪತ್ರಕರ್ತರ ಸಮ್ಮೇಳನ ದಿನವನ್ನು ಶೀಘ್ರವಾಗಿ ತಿಳಿಸಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News