ನನಗೆ ಎರಡು ಬಾರಿ ಕುಮಾರಸ್ವಾಮಿ ಮಂತ್ರಿ ಸ್ಥಾನ ತಪ್ಪಿಸಿದ್ದಾರೆ: ಜಿ.ಟಿ.ದೇವೇಗೌಡ

Update: 2021-11-14 16:18 GMT

ಬೆಂಗಳೂರು, ನ. 14: ನನಗೆ ಎರಡು ಬಾರಿ ಎಚ್.ಡಿ.ಕುಮಾರಸ್ವಾಮಿ ಮಂತ್ರಿ ಸ್ಥಾನ ತಪ್ಪಿಸಿದ್ದಾರೆ. ಸಮ್ಮಿಶ್ರ ಸರಕಾರದಲ್ಲಿ ನಾನು ಕೇಳಿದ ಮಂತ್ರಿ ಸ್ಥಾನ ಕೊಡಲಿಲ್ಲ. ಹುಣಸೂರು ಉಪ ಚುನಾವಣೆಯಲ್ಲಿ ನಾನು ಜೆಡಿಎಸ್ ನಾಯಕರಿಗೆ ನನ್ನ ಮಗನನ್ನ ನಿಲ್ಲಿಸೋದಿಲ್ಲವೆಂದು ಹೇಳಿದ್ದೇನೆ ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ನಾನು ಎರಡೂವರೇ ವರ್ಷಗಳಿಂದ ಜೆಡಿಎಸ್‍ನಿಂದ ದೂರ ಇದ್ದೇನೆ. ಅವರು ನಮ್ಮನ್ನ ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ. ನಾವೂ ಹೋಗಿಲ್ಲ. ನನ್ನ ವಿರುದ್ಧವೇ ಈಗ ನಮ್ಮ ಕ್ಷೇತ್ರದಲ್ಲಿ ಅಧ್ಯಕ್ಷನನ್ನ ನೇಮಕ ಮಾಡಿ ನನ್ನ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ' ಎಂದು ಇದೇ ಸಂದರ್ಭದಲ್ಲಿ ದೂರಿದರು.

ಕಾಂಗ್ರೆಸ್ ಸೇರ್ಪಡೆ ಕುರಿತು ಪ್ರತಿಕ್ರಿಯಿಸಿದ ಅವರು, ಚುನಾವಣೆ ಸಮಯದಲ್ಲಿ ಕ್ಷೇತ್ರದ ಜನರ ಅಭಿಪ್ರಾಯ ಪಡೆದು ತೀರ್ಮಾನ ಮಾಡುತ್ತೇನೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News