ಎಸ್ಕೆಪಿಎ ಉಡುಪಿ ವಲಯದ ವಾರ್ಷಿಕ ಕ್ರೀಡಾಕೂಟ
ಉಡುಪಿ, ನ.15: ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ನಮ್ಮ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬಹುದು. ಆದುದರಿಂದ ನಾವು ಆರೋಗ್ಯ ವಂತರಾಗಿರಬೇಕಾದರೆ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯಾಧ್ಯಕ್ಪ ಪ್ರಕಾಶ್ ಜತ್ತನ್ ಹೇಳಿದ್ದಾರೆ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ವತಿಯಿಂದ ಬೀಡನಗುಡ್ಡೆ ಕ್ರೀಡಾಂಗಣದಲ್ಲಿ ಆಯೋಜಿಸಲಾದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಉಡುಪಿ ವಲಯದ ಮಾಜಿ ಅಧ್ಯಕ್ಷ ಅನಿಶ್ ಶೆಟ್ಟಿಗಾರ್, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಕೊಳಲಗಿರಿ, ಕ್ರೀಡಾಕಾರ್ಯ ದರ್ಶಿಗಳಾದ ಅಶೋಕ್ ಪುತ್ರನ್, ಪ್ರವೀಣ್ ಖಂಡಿಗೆ, ಕೋಶಾಧಿಕಾರಿ ದಿವಾಕರ ಹಿರಿಯಡ್ಕ, ಉಪಾಧ್ಯಕ್ಷ ಸುರಭಿ ಸುದೀರ್ ಶೆಟ್ಟಿ, ಎಸ್ಕೆಪಿಎ ಸೊಸೈಟಿ ಅಧ್ಯಕ್ಷ ಕೆ.ವಾಸುದೇವ ರಾವ್, ಕಟ್ಟಡ ಸಮಿತಿ ಸಂಚಾಲಕ ಆಸ್ಟ್ರೋ ಮೋಹನ್ ಉಪಸ್ಥಿತರಿದ್ದರು.
ವಲಯಾಧ್ಯಕ್ಷ ಜನಾರ್ದನ್ ಕೊಡವೂರು ಸ್ವಾಗತಿಸಿದರು. ಪ್ರಧಾನ ಕಾರ್ಯ ದರ್ಶಿ ಪರ್ವೀನ್ ಕೊರೆಯ ವಂದಿಸಿದರು. ರಾಘವೇಂದ್ರ ಶೇರಿಗಾರ್ ಕಾರ್ಯ ಕ್ರಮ ನಿರೂಪಿಸಿದರು.