ಅತ್ಯಾಚಾರಿಗಳ ವಿರುದ್ಧ ರಾಜ್ಯಾದ್ಯಂತ ಏಕಾಂಗಿ ಸೈಕಲ್ ಜಾಥಾ; ಡಿಸಿಗಳಿಗೆ ಮನವಿ, ಕಠಿಣ ಶಿಕ್ಷೆಗೆ ಆಗ್ರಹ

Update: 2021-11-15 16:33 GMT

ಬೆಂಗಳೂರು, ನ.15: ಮಹಿಳಾ ದೌರ್ಜನ್ಯ ತಡೆಗೆ ಆಗ್ರಹಿಸಿ ಕಳೆದ 86 ದಿನಗಳಿಂದ ಕಿರಣ್ ಸೈಕಲ್ ಜಾಥವನ್ನು ಕೈಗೊಂಡಿರುವ ಕಿರಣ್ ರಾಜ್ಯದ ಪ್ರತಿ ಜಿಲ್ಲೆಗೂ ತೆರಳಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತಿದ್ದಾರೆ.

ಇತ್ತೀಚೆಗೆ ಅತ್ಯಾಚಾರ ಪ್ರಕರಣ ಹೆಚ್ಚುತ್ತಿರುವ ಕಾರಣ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಲಿ ಎಂದು ಆಗ್ರಹಿಸಿ ಏಕಾಂಗಿಯಾಗಿ ಸುಮಾರು 3,500 ಕಿಲೋಮೀಟರ್ ಸೈಕಲ್ ಜಾಥಾ ನಡೆಸಿರುವ ವಿದ್ಯಾರ್ಥಿ ಕಿರಣ್, ಈಗಾಗಲೇ ರಾಜ್ಯದ 26 ಜಿಲ್ಲೆಗಳನ್ನು ಸುತ್ತಿದ್ದಾರೆ. ಇನ್ನು ಉಳಿದ ಜಿಲ್ಲೆಗಳಿಗೆ ಭೇಟಿ ನೀಡಿ ಮನವಿ ಸಲ್ಲಿಸಲಿದ್ದಾರೆ. ಕಿರಣ್ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಲು ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಗೂ ಮನವಿ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News