ಬೆಂಗಳೂರಿನಲ್ಲಿ ಹಲವೆಡೆ ಧಾರಾಕಾರ ಮಳೆ: ಮನೆಗೆ ನುಗ್ಗಿದ ನೀರು, ವಾಹನ ಸವಾರರ ಪರದಾಟ
Update: 2021-11-15 23:16 IST
ಬೆಂಗಳೂರು: ನಗರದ ಹಲವೆಡೆ ಸುರಿದ ಭಾರೀ ಮಳೆಯಿಂದಾಗಿ 10 ಕ್ಕೂ ಹೆಚ್ಚು ಮನೆಗೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತಾಗಿದೆ
ಇಲ್ಲಿನ ಕೋರಮಂಗಲ, ಕಾವಲ್ಭೈರಸಂದ್ರ, ಜೆ.ಪಿ.ನಗರ, ಶಾಂತಿನಗರ, ಮೆಜೆಸ್ಟಿಕ್, ಲಾಲ್ಬಾಗ್, ಕೆ.ಆರ್.ಸರ್ಕಲ್, ರಿಚ್ಮಂಡ್ ಸರ್ಕಲ್, ವಿಲ್ಸನ್ ಗಾರ್ಡನ್, ಜಯನಗರ ಸೇರಿ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಮಳೆಯಿಂದ ಟ್ರಾಫಿಕ್ ಜಾಮ್ ಆಗಿ ಸವಾರರು ಪರದಾಡುವಂತಾಗಿದೆ.
ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದು, ಮನೆಯಲ್ಲಿರುವ ವಸ್ತುಗಳು ಮಳೆನೀರಿನಿಂದ ಆವೃತವಾಗಿದೆ.