ನಾಪತ್ತೆ

Update: 2021-11-16 16:12 GMT

ಕಾರ್ಕಳ, ನ.16: ಕುಕ್ಕುಂದೂರು ಗ್ರಾಮದ ಗುಂಡ್ಯಡ್ಕ ನಿವಾಸಿ ರಮೇಶ(60) ಎಂಬವರು ನ.13ರಂದು ಮಧ್ಯಾಹ್ನ 2ಗಂಟೆಗೆ ಕಾರ್ಕಳ ಬಸ್ ನಿಲ್ದಾಣದ ಬಳಿಯಿಂದ ಹೋದವರು ಈವರೆಗೆ ವುನೆಗೆ ಬಾರದೇ ನಾಪತ್ತೆ ಯಾಗಿದ್ದಾರೆ.

5 ಅಡಿ 3 ಇಂಚು ಎತ್ತರ, ಬಿಳಿ ಕೂದಲು ಹೊಂದಿರುವ ಇವರು, ಸಿಮೆಂಟ್ ಬಣ್ಣದ ಪ್ಯಾಂಟ್ ಮತ್ತು ನೀಲಿ ಹಳದಿ ಬಣ್ಣದ ಟಿ- ಶರ್ಟ್ ಧರಿಸಿದ್ದಾರೆ. ಇವರಿಗೆ ಮಾತನಾಡಲು ಬರುವುದಿಲ್ಲ ಹಾಗೂ ಕಿವಿಯೂ ಕೇಳುವುದಿಲ್ಲ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News