ಚಿಕ್ಕಮಗಳೂರು: ಸರಣಿ ಅಪಘಾತ; ಓರ್ವ ಮೃತ್ಯು

Update: 2021-11-16 16:17 GMT

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಸಮೀಪದ ಕಬ್ಬಿಣ ಸೇತುವೆ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಎರಡು ಕಾರುಗಳು ನುಜ್ಜುಗುಜ್ಜಾಗಿವೆ. 

ಮಂಗಳವಾರ ಸಂಜೆ ವೇಳೆ ಕಾರು ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಚಿತ್ರ ದುರ್ಗದಿಂದ ಧರ್ಮಸ್ಥಳಕ್ಕೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಢಿಕ್ಕಿ ಹೊಡೆದು ನಂತರ ಎದುರಿನಿಂದ ಬರುತ್ತಿದ್ದ ತರಾಕಾರಿ ಸಾಗಣೆಯ ಟಾಟಾಏಸ್ ವಾಹನ ಸೇರಿದಂತೆ ಎರಡು ಕಾರುಗಳಿಗೆ ಢಿಕ್ಕಿಯಾಗಿದೆ.

ಬಸ್ ಢಿಕ್ಕಿಯಾದ ಪರಿಣಾಮ ಕಾರು ಚಾಲಕರ ಮಧನ್ ಎಂಬಾತ ಮೃತಪಟ್ಟಿದ್ದು, ಬಸ್‍ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 
ಇನ್ನು ಬಸ್ ಗುದ್ದಿದ ರಭಸಕ್ಕೆ ಟಾಟಾ ಏಸ್ ವಾಹನ ಹಾಗೂ ಎರಡು ಕಾರುಗಳು ನುಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಆಲ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News