'ಭಾಷಣ ಮೊಟಕುಗೊಳಿಸಿ ಹೊರ ನಡೆದ ಸಿದ್ದರಾಮಯ್ಯ, ಕಾಂಗ್ರೆಸ್ ಬಣ ರಾಜಕಾರಣದ ಇನ್ನೊಂದು ಮುಖ' ಎಂದ ಬಿಜೆಪಿ

Update: 2021-11-17 06:07 GMT

ಬೆಂಗಳೂರು: 'ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ಮೊಟಕುಗೊಳಿಸಿ ಹೊರ ನಡೆದಿದ್ದಾರೆ. ಇದಕ್ಕೆ ಕಾರಣ "ಡಿಕೆ ಡಿಕೆ" ಎಂಬ ಘೋಷಣೆ' ಎಂದು ಬಿಜೆಪಿ ಟೀಕಿಸಿದೆ. 

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, 'ಕಾಂಗ್ರೆಸ್ ನ ಬಣ ರಾಜಕಾರಣದ ಇನ್ನೊಂದು ಮುಖ ಅನಾವರಣಗೊಂಡಿದೆ. ಒಡೆದ ಮನೆಯಾಗಿರುವ ಕಾಂಗ್ರೆಸ್‌ನಲ್ಲಿ ಇದು ಸಾಮಾನ್ಯವಲ್ಲವೇ?' ಎಂದು ಪ್ರಶ್ನಿಸಿದೆ. 

ನಿನ್ನೆ ಅರಮನೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಷಣದ ವೇಳೆ ಶಾಸಕ ಝಮೀರ್ ಅಹ್ಮದ್ ಖಾನ್ ಅವರ ಬೆಂಬಲಿಗರ ವರ್ತನೆಗೆ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News