ಮೊದಲ ಬಾರಿಗೆ ನಮ್ಮ ಪಕ್ಷದ ಅಭ್ಯರ್ಥಿ ವಕ್ಫ್ ಮಂಡಳಿಯ ಅಧ್ಯಕ್ಷರಾಗಿದ್ದು ಹೆಮ್ಮೆಯ ವಿಚಾರ: ಸಚಿವೆ ಶಶಿಕಲಾ ಜೊಲ್ಲೆ

Update: 2021-11-17 14:48 GMT

ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಾಫಿ ಸಾಅದಿ ಅವರಿಗೆ ಅಭಿನಂದಿಸಿರುವ  ಮುಜುರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಮೊಟ್ಟ ಮೊದಲ ಬಾರಿಗೆ ನಮ್ಮ ಪಕ್ಷದ ಅಭ್ಯರ್ಥಿ ವಕ್ಫ್ ಮಂಡಳಿಯ ಅಧ್ಯಕ್ಷರಾಗಿದ್ದು ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ. 

ಈ ಕುರಿತು ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಸಚಿವೆ,  ಇಂದು ಬೆಂಗಳೂರಿನಲ್ಲಿ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಮೊಟ್ಟ ಮೊದಲ ಬಾರಿಗೆ ಆಯ್ಕೆಯಾಗಿರುವ ನಮ್ಮ ಪಕ್ಷದ ಅಭ್ಯರ್ಥಿ ಶಾಫಿ ಸಅದಿ ಅವರಿಗೆ ಹೂಗುಚ್ಛ ನೀಡಿ, ಅಭಿನಂದನೆ ಸಲ್ಲಿಸಲಾಯಿತು.

'ಕರ್ನಾಟಕದ ಇತಿಹಾಸದಲ್ಲೇ ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಪ್ರಥಮ ಬಾರಿಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಆಯ್ಕೆಯಾಗಿರುವುದು ನಿಜಕ್ಕೂ ಹೆಮ್ಮೆಯ ವಿಚಾರ' ಎಂದು ಹೇಳಿಕೊಂಡಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News