ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

Update: 2021-11-18 12:53 GMT

ಬೆಂಗಳೂರು: ಹುಬ್ಬಳ್ಳಿ-ಧಾರವಾಡ ಡಿಸಿಪಿ ಕೆ.ರಾಮರಾಜನ್ ವಿರುದ್ಧ ಶಾಸಕ ಅರವಿಂದ್ ಬೆಲ್ಲದ್ ಮತಾಂತರ ಆರೋಪ ಮಾಡಿದ್ದರು. ಅದರ ಬೆನ್ನಲ್ಲೆ ಡಿಸಿಪಿ ಕೆ. ರಾಮರಾಜನ್ ಅವರನ್ನು ಬೆಂಗಳೂರು ನಗರದ ಕಮಾಂಡ್ ಸೆಂಟರ್‌ನ ಡಿಸಿಪಿ ಆಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

ಸಾಹಿಲ್ ಬಾಗ್ಲಾ ಅವರನ್ನು ಡಿಸಿಪಿ, ಕಾನೂನು ಮತ್ತು ಸುವ್ಯವಸ್ಥೆ, ಹು-ಧಾ ನಗರ ಹಾಗೂ ಭದ್ರಾವತಿ ಎಎಲ್‌ಪಿ ಆಗಿ ಜಿತೇಂದ್ರ ಕುಮಾರ್‌ ದಯಾಮ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News