ನೀವಣೆ ಗಣೇಶ ಭಟ್

Update: 2021-11-18 16:00 GMT

ಉಡುಪಿ, ನ.18: ಹಿರಿಯ ವಿದ್ವಾಂಸ ನೀವಣೆ ಗಣೇಶ ಭಟ್ (80) ಬುಧವಾರ ಹುಬ್ಬಳ್ಳಿಯ ಮಗಳ ಮನೆಯಲ್ಲಿ ನಿಧನ ಹೊಂದಿದರು. ಅವರು ಪುತ್ರಿ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ.

ಪ್ರಸಿದ್ಧ ಪ್ರವಚನಕಾರರಾಗಿದ್ದ ನೀವಣೆ ಅವರು ನೂರಾರು ಭಾಗವತ ಸಪ್ತಾಹ ನಡೆಸಿದ್ದರು. ಹರಿದಾಸರಾಗಿ, ಯಕ್ಷಗಾನ ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ ಸಾಧನೆ ಮಾಡಿದ್ದರು. ಹಲವು ಉಪಯುಕ್ತ ಪುಸ್ತಕಗಳನ್ನು ಬರೆದಿದ್ದಾರೆ. ಉಡುಪಿಯ ಯಕ್ಷಗಾನ ಕಲಾರಂಗ ಎರಡು ವರ್ಷಗಳ ಹಿಂದೆ ಅವರಿಗೆ ಪೆರ್ಲ ಕೃ್ಣ ಭಟ್ ಪ್ರಶಸ್ತಿ ನೀಡಿ ಗೌರವಿಸಿತ್ತು.

ಗಣೇಶ್ ಭಟ್ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ