ಸಂಪೂರ್ಣ ಮಾಹಿತಿ ಪಡೆದು ರಾಜ್ಯದಲ್ಲಿ ಕೃಷಿ ಕಾಯ್ದೆ ಹಿಂಪಡೆಯುವ ಬಗ್ಗೆ ನಿರ್ಧಾರ: ಸಿಎಂ ಬೊಮ್ಮಾಯಿ

Update: 2021-11-19 17:39 GMT

ಬೆಂಗಳೂರು: `ರಾಜ್ಯದಲ್ಲಿ ಎಂಪಿಎಂಸಿ ತಿದ್ದುಪಡಿ ಸಹಿತ ಮೂರು ಕೃಷಿ ಕಾಯ್ದೆ ಹಿಂಪಡೆಯುವ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮೂರು ಕೃಷಿ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಪ್ರಕಟಿಸಿದ್ದಾರೆ. ಆ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದೇವೆ' ಎಂದು ಹೇಳಿದ್ದಾರೆ. 

`ಕಾಂಗ್ರೆಸ್ ಸರಕಾರದ ಅವಧಿಯಲ್ಲೇ ಮಸೂದೆಗಳ ಕರಡು ಸಿದ್ಧವಾಗಿತ್ತು. ಅದನ್ನು ಎನ್‍ಡಿಎ ಸರಕಾರ ಅನುಮೋದಿಸಿತ್ತು. ರೈತರ ಒತ್ತಾಯದಂತೆ ಹಿಂಪಡೆಯಲಾಗಿದೆ. ಹೀಗಾಗಿ ಮೂರು ಕೃಷಿ ಕಾಯ್ದೆ ಹಿಂಪಡೆದಿರುವುದರ ಹಿಂದೆ ಬೇರೆ ಯಾವುದೇ ರೀತಿಯ ಉದ್ದೇಶವಿಲ್ಲ' ಎಂದು ಬಸವರಾಜ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News