ಸಿಎಸ್ ಇಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ

Update: 2021-11-22 16:39 GMT

ಭಟ್ಕಳ: ನಗರದ ಶ್ರೀ ಗುರು ಸುಧೀಂದ್ರ ಕಾಲೇಜಿನ 'ಸಿಎಸ್' ತರಬೇತಿ ಪಡೆದು ರಾಷ್ಟ್ರೀಯ ಮಟ್ಟದ ಸಿಎಸ್. ಇ.ಇ.ಟಿ ಪರೀಕ್ಷೆಯಲ್ಲಿ ರಜನೀ ಶೇಟ್ (ಬಿ.ಕಾಂ-ದ್ವಿತೀಯ),  ಮನಿಶಾ ಮೇಸ್ತ, ಐಶ್ವರ್ಯ ನಾಯ್ಕ, ಫ್ಲೋರಿನಾ ಡಿಸೋಜಾ  (ಬಿ.ಕಾಂ-ತೃತೀಯ), ತೇರ್ಗಡೆ ಹೊಂದುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ತನ್ಮೂಲಕ ಸಿಎ-ಸಿಎಸ್ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗಗನಕುಸುಮವಲ್ಲ ಎನ್ನುವುದನ್ನು ಸಾಮಾನ್ಯ ವಿದ್ಯಾರ್ಥಿಗಳಿಗೂ ತೋರಿಸಿಕೊಟ್ಟಂತಾಗಿದ್ದು 'ಸಿಎ-ಸಿಎಸ್' ಆಕಾಂಕ್ಷಿಗಳಿಗೆ ಭವಿಷತ್ತಿನಲ್ಲಿ ಶ್ರೀ ಗುರು ಸುಧೀಂದ್ರ ಕಾಲೇಜು ಹೊಸ ಆಶಾಕಿರಣವನ್ನು ಮೂಡಿಸಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೇ ವಿ ರೀಚ್ ಅಕಾಡೆಮಿಯೊಂದಿಗೆ ತರಬೇತಿ ಘಟಕವನ್ನು ಆರಂಭಿಸಿದ್ದು, ಮೊದಲ ಯತ್ನದಲ್ಲೇ ಯಶಸ್ಸನ್ನು ಸಾಧಿಸಿರುವ ಈ ವಿದ್ಯಾರ್ಥಿಗಳನ್ನು ಭಟ್ಕಳ ಎಜುಕೇಶನ್ ಟ್ರಸ್ಟ್'ನ ಅಧ್ಯಕ್ಷ ಡಾ. ಸುರೇಶ ನಾಯಕ, ಮ್ಯಾನೇಜಿಂಗ್ ಟ್ರಸ್ಟೀ ರವೀಂದ್ರ ಕೊಲ್ಲೆ, ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ, ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದಿಸಿದ್ದಾರೆ ಎಂದು 'ಸಿಎ - ಸಿಎಸ್' ತರಬೇತಿಯ ಸಂಯೋಜಕರಾದ ಫಣಿಯಪ್ಪ ಹೆಬ್ಬಾರ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News