ವಿಧಾನ ಪರಿಷತ್‌ ಚುನಾವಣೆ; ಸ್ಥಳೀಯ ಕಾರ್ಯಕರ್ತರ ಸಲಹೆಯಂತೆ ಅಭ್ಯರ್ಥಿಗಳನ್ನು ಹಾಕಿದ್ದೇವೆ: ಕುಮಾರಸ್ವಾಮಿ

Update: 2021-11-23 07:48 GMT

ಬೆಂಗಳೂರು: ನಮ್ಮ ಪಕ್ಷದ ಸ್ಥಳೀಯ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ, ಸಲಹೆ ಪಡೆದು 7 ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಹಾಕಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.‌ಡಿ.ಕುಮಾರಸ್ವಾಮಿ ಅವರು ಹೇಳಿದರು.

ಇಂದು ಬೆಳಗ್ಗೆ ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ವಿಧಾನ ಪರಿಷತ್‌ ಚುನಾವಣೆಯಲ್ಲಿ ಆರರಿಂದ ಎಂಟು ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಹಾಕಲಾಗುವುದು ಎಂದು ಈ ಮೊದಲೇ ನಾನು ಹೇಳಿದ್ದೆ. ಈ ಕಾರಣಕ್ಕಾಗಿಯೇ ಮೈಸೂರು, ಕೊಡಗು, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಿದ್ದೇವೆ” ಎಂದರು.

ಕಳೆದ ಚುನಾವಣೆಯಲ್ಲಿ ನಾವು ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವು. ಈಗ ಏಳೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ನನಗಿದೆ. ಸಮಯ ಕಡಿಮೆ ಇದೆ. ಪ್ರಬಲ ಹೋರಾಟ ನಡೆಸಿ ಜಯ ಸಾಧಿಸುವುದು ನಮ್ಮ ಗುರಿಯಾಗಿದೆ ಎಂದ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸಚಿವ ಈಶ್ವರಪ್ಪ ಅವರು ನಮ್ಮ ಬಗ್ಗೆ ಒಂದು ಮಾತು ಹೇಳಿದ್ದಾರೆ. ಜೆಡಿಎಸ್‌ ಪಕ್ಷದಲ್ಲಿ ಶಂಖ ಊದಲಿಕ್ಕೆ ಜನ ಇಲ್ಲ ಎಂದು. ಹೌದು, ಅವರು ಹೇಳಿದ್ದು ನಿಜ. ಎಲ್ಲ ಕಡೆ ಶಂಖ ಊದುವುದಕ್ಕೆ ನಾನೇ ಹೋಗಬೇಕು. ಎಲ್ಲೆಲ್ಲಿ ಶಂಖ ಊದಲು ಸಾಧ್ಯವಿದೆಯೋ ಅಂತಹ ಕಡೆ ಮಾತ್ರ ಅಭ್ಯರ್ಥಿಗಳನ್ನು ಹಾಕಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News