ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Update: 2021-11-23 17:22 GMT

ಮಂಗಳೂರು, ನ.23: ಹುಟ್ಟಿನಿಂದಲೇ ಶ್ರವಣ ದೋಷವುಳ್ಳ ಮಕ್ಕಳ ತಾಯಂದಿರಿಗೆ ಪ್ರಾರಂಭಿಕ ಹಂತದಲ್ಲೇ ಅವರ ಮಗುವಿನ ಸಮಸ್ಯೆ ಹಾಗೂ ಪರಿಹಾರದ ಬಗ್ಗೆ ಅರಿವು ಮೂಡಿಸುವ ತರಬೇತಿಗೆ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನಾಲ್ಕು ವರ್ಷದೊಳಗಿನ ಶ್ರವಣ ದೋಷವುಳ್ಳ ಮಕ್ಕಳಿಗೆ ಅವರ ತಾಯಂದಿರ ಸಹಿತ ವಾಕ್ ತರಬೇತಿ ನೀಡಲಾಗುವುದು, ಅವರಿಗೆ ವಸತಿ ರಹಿತ ತರಬೇತಿ ಕೇಂದ್ರವನ್ನು ಸ್ಥಾಪಿಸಲು ಪೂರ್ವದಲ್ಲಿ ಶ್ರವಣದೋಷವುಳ್ಳ ಪುನರ್ವಸತಿ ಸಂಬಂಧಿಸಿದ ಚಿಕಿತ್ಸೆಗಳನ್ನು ನೀಡಲು ಸೌಕರ್ಯವನ್ನು ಹೊಂದಿರಬೇಕು. ಸೂಕ್ತ ಕಟ್ಟಡದ ವ್ಯವಸ್ಥೆ ಹಾಗೂ ಇತರೆ ಸಂಬಂಧಿತ ಸೌಕರ್ಯವನ್ನು ಪಡೆದಿರುವ ಉತ್ತಮ ಸೇವೆ ಸಲ್ಲಿಸುತ್ತಿರುವ ಸಂಸ್ಥೆ ಹಾಗೂ ತರಬೇತಿಯನ್ನು ನೀಡುತ್ತಿರುವ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಹಾಗೂ ಇತರ ಮಾಹಿತಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ (ಕಚೇರಿ ದೂ.ಸಂ: 0824-2458173)ಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News