×
Ad

ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್– ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಭೇಟಿ

Update: 2021-11-24 17:25 IST

ಲಕ್ನೊ: ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಇಂದು ಲಕ್ನೋದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿಯಾದರು.

24 ಗಂಟೆಗಳ ಹಿಂದೆ ಯಾದವ್ ಹಾಗೂ  ರಾಷ್ಟ್ರೀಯ ಲೋಕದಳದ ಜಯಂತ್ ಚೌಧರಿ ಅವರು ಲಕ್ನೋದಲ್ಲಿ ತಮ್ಮ ಭೇಟಿಯ ಛಾಯಾಚಿತ್ರಗಳನ್ನು ಪೋಸ್ಟ್ ಮಾಡಿದರು. ಭಾರತದ ಅತ್ಯಂತ ಜನನಿಬಿಡ ರಾಜ್ಯದಲ್ಲಿ ನಿರ್ಣಾಯಕ 2022 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ತಮ್ಮ ಪಕ್ಷಗಳ ನಡುವಿನ ಮೈತ್ರಿಯು ಬಹುತೇಕ ಅಂತ್ಯವಾಗಿದೆ ಎಂದು ಸುಳಿವು ನೀಡಿದ್ದರು.

ಉತ್ತರಪ್ರದೇಶದಲ್ಲಿ  ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರಕಾರಕ್ಕೆ ಪ್ರಮುಖ ಸವಾಲಾಗಿ ಹೊರಹೊಮ್ಮಿದ ಯಾದವ್, ರಾಜ್ಯ ಚುನಾವಣೆಗೆ ಮುಂಚಿತವಾಗಿ ಸಮಾಜವಾದಿ ಪಕ್ಷವು ದೊಡ್ಡ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ.

 ಸಮಾಜವಾದಿ ಪಕ್ಷವು 2017 ರ ರಾಜ್ಯ ಚುನಾವಣೆಗೆ ಕಾಂಗ್ರೆಸ್ ಹಾಗೂ  2019 ರ ಲೋಕಸಭೆ ಚುನಾವಣೆಗೆ ಮಾಯಾವತಿಯವರ ಬಿಎಸ್ಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಬಿಜೆಪಿ ಎರಡೂ ಚುನಾವಣೆಗಳನ್ನು ಗೆದ್ದುಕೊಂಡಿದೆ.

ಬಿಜೆಪಿ ವಿರುದ್ಧ ಸಾಮಾನ್ಯ ವೇದಿಕೆಗಾಗಿ ಅಖಿಲೇಶ್ ಯಾದವ್ ಅವರೊಂದಿಗೆ ಮಾತುಕತೆ ಆರಂಭಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿಕೊಂಡಿದೆ.

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಜುಲೈನಲ್ಲಿ ಅಖಿಲೇಶ್ ಯಾದವ್ ಅವರೊಂದಿಗೆ ಹೆಚ್ಚು ಪ್ರಚಾರದ ಸಭೆಯನ್ನು ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News