ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮ

Update: 2021-11-24 15:05 GMT

ಕುಂದಾಪುರ, ನ.24: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಂಜಿನಿಯರಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಮತ್ತು ಓರಿಯಂಟೇಶನ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣಮೂರ್ತಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶಿಕ್ಷಣದ ಜೊತೆಗೆ ಶಿಸ್ತು ಸಂಯಮವನ್ನು ಅಳವಡಿಸಿಕೊಳ್ಳ ಬೇಕು. ಪದವಿ ಜೊತೆಗೆ ಕ್ರಿಯಾಶೀಲರಾಗಿರುವುದನ್ನು ಕಲಿಯಬೇಕು. ವಿದ್ಯಾರ್ಥಿ ಗಳು ಶ್ರಮ ತ್ಯಾಗ ಪ್ರಾರ್ಥನೆ ಪ್ರಯತ್ನವನ್ನು ಸಮನಾಗಿ ಪ್ರಯೋಗಿಸಿದಾಗ ಯಶಸ್ಸು ಲಭ್ಯ ಎಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಚಂದ್ರರಾವ್ ಮದಾನೆ ವಹಿಸಿದ್ದರು. ಉಪ ಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿಸೋಜ, ಕಾಲೇಜಿನ ಅಕಾ ಡೆಮಿಕ್ ಡೀನ್ ಡಾ.ಪ್ರತಿಭಾ ಪಟೇಲ್ ಮಾತನಾಡಿದರು.

ವಿದ್ಯಾರ್ಥಿ ಹಾಫೀಸ್ ಸ್ವಾಗತಿಸಿದರು. ಇರ್ಫಾನ್ ವಂದಿಸಿದರು ವಿದ್ಯಾರ್ಥಿನಿ ರೇಷ್ಮ ಅತಿಥಿಗಳನ್ನು ಪರಿಚಯಿಸಿದರು, ಆಶ್ರಿತ ಶೆಟ್ಟಿ ಹಾಗೂ ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News