ಪ್ರತ್ಯೇಕ ಪ್ರಕರಣ: ಇಬ್ಬರು ನಾಪತ್ತೆ

Update: 2021-11-24 15:48 GMT

ಕಾರ್ಕಳ, ನ.24: ಮಾನಸಿಕ ತೊಂದರೆಯಿಂದ ಬಳಲುತ್ತಿದ್ದ ಸಚ್ಚೇರಿಪೇಟೆ ಕನ್ನಡಿಬೆಟ್ಟು ನಿವಾಸಿ ಸುಶೀಲ ಎಂಬವರ ಮಗ ಸತೀಶ (46) ಎಂಬವರು ನ. 19ರಂದು ಸಂಜೆ ತಾಯಿ ಜೊತೆಯಲ್ಲಿ ಜಗಳ ಮಾಡಿ ಮನೆ ಬಿಟ್ಟು ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಮುಂಡ್ಕೂರು ಗ್ರಾಮದ ಅಬೂಬಕ್ಕರ್(54) ಎಂಬವರು ನ.23ರಂದು ಬೆಳಗ್ಗೆ ಬ್ಯಾಂಕಿಗೆ ಹೋಗಿ ಬರುವು ದಾಗಿ ಹೇಳಿ ಹೋದವರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News