ಹಂಸಲೇಖ ಪರವಾಗಿ ಚಿತ್ರರಂಗದ ಮೌನ ಸರಿಯಲ್ಲ: ನಟ ಚೇತನ್ ಅಹಿಂಸಾ

Update: 2021-11-26 13:42 GMT
ಚೇತನ್ ಅಹಿಂಸಾ

ಬೆಂಗಳೂರು: 'ಚಿತ್ರ ರಂಗಕ್ಕೆ ಅಪೂರ್ವ ಕೊಡುಗೆ ನೀಡಿರುವ ಸಂಗೀತ ನಿರ್ದೇಶಕ ಹಂಸಲೇಖ ಪರವಾಗಿ ಚಿತ್ರರಂಗ ಮೌನಕ್ಕೆ ಶರಣಾಗಿರುವುದು ಸರಿಯಲ್ಲ, ಅವರ ಬೆಂಬಲಕ್ಕೆ ನಿಲ್ಲಬೇಕಿತ್ತು' ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. 

ಸಂಗೀತ ನಿರ್ದೇಶಕ ಹಂಸಲೇಖ `ಸತ್ಯದ ಮಾತುಗಳನ್ನು ಬೆಂಬಲಿಸಿ' ನಗರದಲ್ಲಿ `ಸಂವಿಧಾನ ಸಂರಕ್ಷಣಾ ಐಕ್ಯತಾ ಸಮಿತಿ' ನೇತೃತ್ವದಲ್ಲಿ ನಡೆದ ಬೃಹತ್ ರ್‍ಯಾಲಿ ಹಾಗೂ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. 

`ಸಸ್ಯಾಹಾರಿಗಳು ಮತ್ತು ಮಾಂಸಾಹಾರಿಗಳ ನಡುವಿನ ಸಂಘರ್ಷ ಇದಲ್ಲ. ಬದಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ಈ ಹೋರಾಟ. ಹಂಸಲೇಖ ಅವರು ಕ್ಷಮೆ ಕೋರಿದ ಬಳಿಕವೂ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ಜೈಲಿಗೆ ಕಳುಹಿಸುವ ಸಂಚಿನ ಮನಸ್ಥಿತಿಯನ್ನು ಸಹಿಸಲು ಸಾಧ್ಯವಿಲ್ಲ' ಎಂದು ಹೇಳಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News